ಕಣಿವೆ, ಅ. ೧೧: ಮಡಿಕೇರಿ ದಸರಾ ಉದ್ಘಾಟನೆಗೆ ಜಿಲ್ಲೆಗೆ ಆಗಮಿಸಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಕುಶಾಲನಗರ ದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ವಿಭಿನ್ನವಾಗಿ ಸ್ವಾಗತಿಸಿದರು.

ನಗರದ ಗಣಪತಿ ದೇಗುಲದ ರಾಷ್ಟಿçÃಯ ಹೆದ್ದಾರಿಯ ಎರಡೂ ಬದಿಗಳಲ್ಲಿ ಕಿಕ್ಕಿರಿದು ಸೇರಿದ ಕಾರ್ಯಕರ್ತರು ನಾಲ್ಕು ಜೆಸಿಬಿ ಯಂತ್ರಗಳ ಸಹಾಯದಿಂದ ಡಿಕೆಶಿ ಮೇಲೆ ಹೂ ರಾಶಿ ಸುರಿಸಿ ಸ್ವಾಗತಿಸಿದರು. ಹಾಗೆಯೇ ಮತ್ತೊಂದು ಕ್ರೇನ್ ಮೂಲಕ ಬೃಹತ್ ಗುಲಾಬಿ ಹಾರವನ್ನು ಹಾಕುವ ಮೂಲಕ ಸ್ವಾಗತಿಸಿ ಸಂಭ್ರಮಿಸಿದರು.

ಉಸ್ತುವಾರಿ ಸಚಿವ ಭೋಸರಾಜು, ಮಡಿಕೇರಿ ಶಾಸಕ ಡಾ.ಮಂತರಗೌಡ, ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ. ಶಶಿಧರ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ, ಉಚ್ಛನ್ಯಾಯಾಲಯದ ವಕೀಲ ಹೆಚ್.ಎಸ್.ಚಂದ್ರಮೌಳಿ, ಕೆಪಿಸಿಸಿ ಕಾರ್ಯದರ್ಶಿ ಕೆ.ಪಿ.ಚಂದ್ರಕಲಾ, ಕೆ.ಕೆ.ಮಂಜುನಾಥಕುಮಾರ್ ಸೇರಿದಂತೆ ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಇದ್ದರು.