ಮಡಿಕೇರಿ, ಅ. ೧೧ : ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಕೊಡಗು ಜಿಲ್ಲಾ ಸಹಕಾರ ಯೂನಿಯನ್, ಸೋಮವಾರಪೇಟೆ ತಾಲ್ಲೂಕು ಲ್ಯಾಂಪ್ಸ್, ಬಸವನಹಳ್ಳಿ ಇವರ ಸಂಯುಕ್ತಾಶ್ರಯದಲ್ಲಿ ಗಿರಿಜನರ ದೊಡ್ಡ ಪ್ರಮಾಣದ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷರು, ಆಡಳಿತ ಮಂಡಳಿ ಸದಸ್ಯರುಗಳಿಗೆ ಸಹಕಾರ ಕಾಯ್ದೆ-ಕಾನೂನು ಹಾಗೂ ಸಂಘದ ಅಭಿವೃದ್ಧಿ ಕುರಿತು ಶಿಕ್ಷಣ ಕಾರ್ಯಕ್ರಮವು ತಾ. ೧೫ ರಂದು ಬೆಳಿಗ್ಗೆ ೧೧ ಗಂಟೆಗೆ ಬಸವನಹಳ್ಳಿ ಗಿರಿಜನರ ಸಮುದಾಯ ಭವನದಲ್ಲಿ ನಡೆಯಲಿದೆ.