ಮಡಿಕೇರಿ, ಅ, ೧೧: ಜೀವನದಿ ಕಾವೇರಿಯ ತೀರ್ಥೋದ್ಭವದ ಕಾವೇರಿ ಸಂಕ್ರಮಣ ಆಚರಣೆಗೆ ರಾಜ್ಯ ಸರಕಾರ ರೂ. ೭೫ ಲಕ್ಷ ಅನುದಾನವನ್ನು ನೀಡಿದೆ.

ಮುಖ್ಯಮಂತ್ರಿ ಕಾನೂನು ಸಲಹೆಗಾರ, ವೀರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ಈ ಕುರಿತು ಮಾಹಿತಿ ನೀಡಿದ್ದು, ಇದೇ ಮೊದಲ ಬಾರಿಗೆ ದೊಡ್ಡ ಮಟ್ಟದ ಅನುದಾನವನ್ನು ರಾಜ್ಯ ಸರಕಾರ ನೀಡಿದೆ. ಈ ಸಂಬAಧ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಧಾರ್ಮಿಕ ದತ್ತಿ ಇಲಾಖೆ ಸಚಿವ ರಾಮಲಿಂಗರೆಡ್ಡಿ ಅವರ ಗಮನ ಸೆಳೆದಿದ್ದೆ. ಇದೀಗ ಧಾರ್ಮಿಕ ದತ್ತಿ ಇಲಾಖೆ ಅನುದಾನಕ್ಕೆ ಮಂಜೂರಾತಿ ನೀಡಿದ್ದು, ಜಿಲ್ಲಾಧಿಕಾರಿ ಖಾತೆಗೆ ಹಣ ವರ್ಗಾವಣೆಯಾಗಲಿದೆ ಎಂದು ಮಾಹಿತಿ ನೀಡಿದ್ದಾರೆ.

ದೊರೆತ ಅನುದಾನ ಬಳಸಿಕೊಂಡು ಕಾವೇರಿ ಸಂಕ್ರಮಣ ಶ್ರದ್ಧಾಭಕ್ತಿಯೊಂದಿಗೆ ಅದ್ದೂರಿಯಾಗಿ ಆಚರಿಸಲಾಗುವುದು. ಭಕ್ತಾದಿಗಳಿಗೆ ಯಾವುದೇ ಕುಂದು-ಕೊರತೆ ಎದುರಾಗದಂತೆ ನಿಗಾವಹಿಸಲಾಗುವುದು. ಅನುದಾನ ಉಳಿದ್ದಲ್ಲಿ ಕ್ಷೇತ್ರದ ಅಭಿವೃದ್ಧಿಗೆ ಬಳಸಿಕೊಳ್ಳಲಾಗುವುದು ಎಂದು ತಿಳಿಸಿದರು.