ಸೋಮವಾರಪೇಟೆ, ಅ. ೧೧: ಇಲ್ಲಿನ ಶ್ರೀ ಬಸವೇಶ್ವರ ದೇವಾಲಯದಲ್ಲಿ ವೀರಶೈವ ಸಮಾಜದ ವತಿಯಿಂದ ಶರನ್ನವರಾತ್ರಿ ಅಂಗವಾಗಿ ದುರ್ಗಾಷ್ಟಮಿಯ ಪ್ರಯುಕ್ತ ಸಾಮೂಹಿಕ ದುರ್ಗಾ ಹೋಮ ನಡೆಯಿತು.

ಶರನ್ನವರಾತ್ರಿ ಉತ್ಸವದ ಅಂಗವಾಗಿ ಪ್ರತಿದಿನ ಉತ್ಸವ ಮೂರ್ತಿಯನ್ನು ವೈವಿಧ್ಯಮಯವಾಗಿ ಅಲಂಕಾರ ಮಾಡಿ ಪೂಜಿಸಲಾಗುತ್ತಿದ್ದು, ನೂರಾರು ಮಂದಿ ಭಕ್ತರು ಭಾಗಿಯಾಗುತ್ತಿದ್ದಾರೆ. ಸಾಮೂಹಿಕ ದುರ್ಗಾ ಹೋಮದಲ್ಲಿ ಪೂರ್ಣಾಹುತಿ ಮಹಾ ಮಂಗಳಾರತಿ ನಂತರ ಪ್ರಸಾದ ವಿನಿಯೋಗ ನೆರವೇರಿತು.