ಕುಶಾಲನಗರದ ರಥಬೀದಿಯ ಹಿರಿಯ ವರ್ತಕರಾಗಿದ್ದ ಎಸ್. ಕೃಷ್ಣರಾಜಶೆಟ್ಟಿ (೯೯) ತಾ. ೧೧ರಂದು ಬೆಂಗಳೂರಿನಲ್ಲಿ ನಿಧನರಾದರು.

ಮೃತರ ಅಂತ್ಯಕ್ರಿಯೆ ತಾ. ೧೨ರಂದು (ಇಂದು) ಕುಶಾಲನಗರದ ಹಿಂದೂ ರುದ್ರಭೂಮಿಯಲ್ಲಿ ನಡೆಯಲಿದೆ.

ಮೃತರ ಮೊಮ್ಮಗ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಆಪ್ತ ಕಾರ್ಯದರ್ಶಿಯಾಗಿರುವ ಐಎಎಸ್ ಅಧಿಕಾರಿ ಎಸ್.ಎಸ್. ನಕುಲ್ ಆಗಿದ್ದು, ಕುಶಾಲನಗರದ ರಥಬೀದಿಯ ಕಾವೇರಿ ಟೆಕ್ಸ್ಟೈಲ್ ಮಾಲೀಕ ಎಸ್.ಕೆ. ಸತೀಶ್ ಸೇರಿದಂತೆ ಮೂವರು ಪುತ್ರರು ಹಾಗೂ ಪತ್ನಿಯನ್ನು ಅಗಲಿದ್ದಾರೆ.

ಮೃತರ ಗೌರವಾರ್ಥ ಕುಶಾಲನಗರದ ಆರ್ಯವೈಶ್ಯ ಸಮಾಜದ ವತಿಯಿಂದ ಶನಿವಾರ ಬೆಳಿಗ್ಗೆ ಎರಡು ಗಂಟೆಗಳ ಅವಧಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ಸಂತಾಪ ಸೂಚಿಸಲಾಯಿತು.

ಮೃತರ ನಿಧನಕ್ಕೆ ಕೊಡಗು ಜಿಲ್ಲಾ ವಾಣಿಜ್ಯೋದ್ಯಮಿಗಳ ಸಂಘದ ಅಧ್ಯಕ್ಷ ಬಿ.ಆರ್.ನಾಗೇಂದ್ರ ಪ್ರಸಾದ್ ಮತ್ತಿತರರು ಸಂತಾಪ ಸೂಚಿಸಿದ್ದಾರೆ.