ಸೋಮವಾರಪೇಟೆ, ಅ. ೧೩: ಕಳೆದ ಕೆಲ ವರ್ಷಗಳ ಹಿಂದೆ ಸೋಮವಾರಪೇಟೆಯಲ್ಲಿ ನೆಲೆಸಿದ್ದ ದಿ. ಆನಂದ್ ಅಡಪ ಅವರ ಪುತ್ರ, ಭಾರತೀಯ ಸೇನೆಯಲ್ಲಿ ಕರ್ನಲ್ ಆಗಿ ಸೇವೆ ಸಲ್ಲಿಸಿದ್ದ ರತನ್ ಅಡಪ (೬೦) ಅವರು ತಾ. ೧೨ರಂದು ಅನಾರೋಗ್ಯದಿಂದ ನಿಧನರಾದರು.

ಕಳೆದ ಕೆಲ ವರ್ಷಗಳಿಂದ ಬೆಂಗಳೂರಿನಲ್ಲಿ ನೆಲೆಸಿದ್ದ ರತನ್ ಅಡಪ ಅವರು, ಕಳೆದ ಕೆಲ ದಿನಗಳಿಂದ ತೀವ್ರ ಅನಾರೋಗ್ಯಕ್ಕೆ ಒಳಗಾಗಿ ಚಿಕಿತ್ಸೆ ಫಲಿಸದೇ ನಿನ್ನೆ ನಿಧನರಾದರು. ಮೃತದೇಹವನ್ನು ಬೆಂಗಳೂರಿನಲ್ಲಿ ಅಂತಿಮ ದರ್ಶನಕ್ಕೆ ಇಟ್ಟು, ನಂತರ ಮಂಗಳೂರಿನ ಸ್ವಗೃಹಕ್ಕೆ ತಂದು ಇಂದು ಸೇನಾ ಗೌರವದೊಂದಿಗೆ ಅಂತ್ಯಕ್ರಿಯೆ ನಡೆಸಲಾಯಿತು. ರತನ್ ಅಡಪ ಅವರು ಪತ್ನಿ ಸೇರಿದಂತೆ ಓರ್ವ ಪುತ್ರನನ್ನು ಅಗಲಿದ್ದಾರೆ. ಸೋಮವಾರಪೇಟೆ ಸರ್ಕಾರಿ ಪ್ರೌಢಶಾಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಆನಂದ್ ಅಡಪ ಅವರ ಪ್ರಥಮ ಪುತ್ರರಾಗಿದ್ದ ರತನ್ ಅವರು, ಇಲ್ಲಿನ ಆಲೇಕಟ್ಟೆ ರಸ್ತೆಯ ಮನೆಯಲ್ಲಿ ಕೆಲ ವರ್ಷ ಇದ್ದರು. ನಂತರ ಉದ್ಯೋಗ ನಿಮಿತ್ತ ಬೆಂಗಳೂರಿನಲ್ಲಿ ನೆಲೆಸಿದ್ದರು.