ಕೂಡಿಗೆ, ಅ. ೧೫: ಕೂಡಿಗೆಯಲ್ಲಿ ಭಾರತ್ ಒನ್ ಜನ ಸಂಪರ್ಕ ಕೇಂದ್ರದ ಆರಂಭಕ್ಕೆ ಕೂಡಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆ.ಟಿ. ಗಿರೀಶ್ ಕುಮಾರ್ ಚಾಲನೆ ನೀಡಿದರು.

ಭಾರತ್ ಒನ್ ಜನ ಸಂಪರ್ಕ ಕೇಂದ್ರದ ಮೂಲಕ ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿವಿಧ ಸೇವಾ ಯೋಜನೆಯ ಸೌಲಭ್ಯಗಳ ಮಾಹಿತಿಯನ್ನು ಪಡೆಯಲು ಮತ್ತು ಹೊಸ ಹೊಸ ಯೋಜನೆಯ ಸವಲತ್ತುಗಳನ್ನು ಪಡೆಯಲು ಒಂದೇ ಸೂರಿನ ಅಡಿಯಲ್ಲಿ ಗ್ರಾಮೀಣ ಪ್ರದೇಶಗಳ ಜನರಿಗೆ ಅನುಕೂಲವಾಗುವುದರಿಂದ ಮತ್ತು ಸಮಗ್ರವಾದ ಮಾಹಿತಿಯನ್ನು ತಿಳಿದುಕೊಳ್ಳಲು ಈ ಕೇಂದ್ರದ ಪ್ರಯೋಜನವನ್ನು ಗ್ರಾಮಸ್ಥರು ಪಡೆದುಕೊಳ್ಳಬೇಕೆಂದು ಅವರು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಭಾರತ್ ಒನ್ ಜನ ಸಂಪರ್ಕ ಕೇಂದ್ರದ ಅಧಿಕಾರಿ ಎನ್.ಯು. ದೇವದತ್ತ್, ಗಿರೀಶ್ ಕುಮಾರ್, ಹೆಚ್.ಎಸ್. ದೇವರಾಜ್, ಹೆಚ್.ಹೆಚ್. ಶೋಭಾ ಸೇರಿದಂತೆ ಗ್ರಾಮಸ್ಥರು ಹಾಜರಿದ್ದರು.