ಶ್ರೀಮಂಗಲ, ಅ. ೧೫: ಕಳೆದ ಮೂರು ದಿನಗಳಿಂದ ಶ್ರೀಮಂಗಲ ಹೋಬಳಿಯ ವೆಸ್ಟ್ನೆಮ್ಮಲೆ ಗ್ರಾಮದಲ್ಲಿ ಜಾನುವಾರುಗಳ ಮೇಲೆ ದಾಳಿ ಮಾಡಿರುವ ಹುಲಿಯನ್ನು ಸೆರೆ ಹಿಡಿಯಲು ನಡೆಸುತ್ತಿರುವ ಅರಣ್ಯ ಇಲಾಖೆಯ ಕಾರ್ಯಾಚರಣೆಯನ್ನು ಹುಲಿ ಸಮೀಪದ ಅರಣ್ಯಕ್ಕೆ ಹೋಗಿರುವ ಹೆಜ್ಜೆ ಗುರುತು ಪತ್ತೆಯಾದ ಹಿನ್ನೆಲೆ ಮಂಗಳವಾರ ಸಂಜೆಯಿAದ ಸ್ಥಗಿತಗೊಳಿಸಲಾಗಿದೆ.

ಹುಲಿ ತನ್ನ ಆವಾಸ ಸ್ಥಾನಕ್ಕೆ ಹಿಂತಿರುಗಿರುವುದು ಸಂತಸ ತಂದಿದೆ. ಈ ಮೂಲಕ ಹುಲಿಯಿಂದ ಆತಂಕ ಗೊಂಡಿದ್ದ ಜನರಲ್ಲಿ ಸಮಾಧಾನ ಮೂಡಿಸಿದೆ. ಕಾರ್ಯಾಚರಣೆ ಯಶಸ್ವಿಯಾಗಿದೆ ಎಂದು ಕಾರ್ಯಾಚರಣೆ ಮೇಲುಸ್ತುವಾರಿ ವಹಿಸಿದ್ದ ರಾಜ್ಯ ವನ್ಯಜೀವಿ ಮಂಡಳಿ ಸದಸ್ಯ ಮೇರಿಯಂಡ ಸಂಕೇತ್ ಪೂವಯ್ಯ ತಿಳಿಸಿದ್ದಾರೆ.

ಹುಲಿಯು ಜಾನುವಾರುಗಳ ಮೇಲೆ ದಾಳಿ ನಡೆಸಿದ ಸ್ಥಳದಲ್ಲಿ ದೊರೆತಿರುವ ಹೆಜ್ಜೆ ಗುರುತು ಹಾಗೂ ಬೀರುಗ ಗ್ರಾಮದ ಪಾಚಿಬೇಲ್ ಮೂಲಕ ಬ್ರಹ್ಮಗಿರಿ ಅಭಯಾರಣ್ಯಕ್ಕೆ ಹುಲಿ ತೆರಳಿರುವ ಸ್ಥಳದಲ್ಲಿ ಪತ್ತೆಯಾಗಿರುವ ಹುಲಿ ಹೆಜ್ಜೆಯು ಪರಸ್ಪರ ಹೊಂದಾಣಿಕೆಯಾಗುತ್ತಿದ್ದು, ವೈಜ್ಞಾನಿಕವಾಗಿಯೂ ಅರಣ್ಯ ಇಲಾಖೆ ಅಧಿಕಾರಿಗಳು ಖಚಿತ ಪಡಿಸಿದ್ದಾರೆ. ಈ ಹಿನ್ನೆಲೆ ಸ್ಥಳದಲ್ಲಿರುವ ಸಾಕಾನೆ, ಕ್ಷಿಪ್ರ ಕಾರ್ಯಪಡೆ, ಕಾಡಾನೆ ಟಾಸ್ಕ್ ಫೋರ್ಸ್ಗಳನ್ನು ಕಾರ್ಯಾಚರಣೆ ಯಿಂದ ಹಿಂಪಡೆಯ ಲಾಗುವುದು. ಆದರೆ ಶ್ರೀಮಂಗಲ ವನ್ಯಜೀವಿ ವಿಭಾಗದ ವಲಯಾರಣ್ಯಾಧಿಕಾರಿ ಅರವಿಂದ್ ಅವರ ನೇತೃತ್ವದಲ್ಲಿ ತಂಡವೊAದು ಹುಲಿ ಚಲನವಲನದ ಮೇಲೆ ನಿಗಾ ಇಡುತ್ತದೆ ಎಂದರು.

ಕಳೆದ ೨ ತಿಂಗಳಿನಿAದ ಶ್ರೀಮಂಗಲ ಹೋಬಳಿ ವ್ಯಾಪ್ತಿಯಲ್ಲಿ ೧೬ ಹಸುಗಳನ್ನು ಹುಲಿ ದಾಳಿ ಮಾಡಿ ಕೊಂದಿದೆ. ಈ ಹಿನ್ನೆಲೆ ಮುಖ್ಯ ಮಂತ್ರಿಗಳ ಕಾನೂನು ಸಲಹೆಗಾರರು ಮತ್ತು ಶಾಸಕ ಎ.ಎಸ್. ಪೊನ್ನಣ್ಣ ಅವರು ಅರಣ್ಯ ಸಚಿವರು ಮತ್ತು ವನ್ಯಜೀವಿ ವಿಭಾಗದ ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿಗಳ ಜೊತೆ ಸಮಾಲೋಚನೆ ನಡೆಸಿ ಅರವಳಿಕೆ ನೀಡಿ ಹುಲಿ ಸೆರೆಗೆ ಅನುಮತಿ ಒದಗಿಸಿದ್ದರು. ಹುಲಿ ಸೆರೆಗೆ ಕಾರ್ಯಾ ಚರಣೆ ೩ ದಿನದಿಂದ ನಡೆದಿತ್ತು. ಮತ್ತೆ ಹುಲಿ ಸಂಚಾರ ಅಥವಾ ಜಾನುವಾರುಗಳ ಮೇಲೆ ದಾಳಿ ಪ್ರಕರಣ ಕಂಡು ಬಂದರೆ ಮತ್ತೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಂಕೇತ್ ಪೂವಯ್ಯ ವಿವರಿಸಿದರು.

ಈ ಸಂದರ್ಭ ಮಾತನಾಡಿದ ಅರಣ್ಯ ಇಲಾಖೆಯ

(ಮೊದಲ ಪುಟದಿಂದ) ವನ್ಯಜೀವಿ ಮಾಜಿ ವಾರ್ಡನ್ ಕುಂಞAಗಡ ಬೋಸ್ ಮಾದಪ್ಪ ಅವರು, ಕೂಂಬಿAಗ್‌ನಿAದ ಹುಲಿಯ ಪ್ರಶಾಂತತೆಗೆ ತೊಂದರೆ ಉಂಟಾಗಿ ಹುಲಿ ತನ್ನ ಆವಾಸ ಸ್ಥಾನಕ್ಕೆ ಹಿಂತಿರುಗಿದೆ. ಇದನ್ನು ಅರಣ್ಯಾಧಿಕಾರಿಗಳು ಸಹ ಖಚಿತಪಡಿಸಿದ್ದಾರೆ. ಹಿಂತಿರುಗಿರುವ ಹುಲಿ ಕೂಡಲೇ ನಾಡಿಗೆ ಬರುವ ಸಾಧ್ಯತೆ ಕಡಿಮೆ. ಹುಲಿಯನ್ನು ಸೆರೆ ಹಿಡಿಯುವುದಕ್ಕಿಂತ ಅದು ಬಂದ ಜಾಗಕ್ಕೆ ವಾಪಸು ಹೋಗಿರುವುದು ಒಳ್ಳೆಯ ಬೆಳವಣಿಗೆಯಾಗಿದೆ. ಸೆರೆ ಹಿಡಿಯುವುದೇ ಆಗಲಿ, ಹುಲಿಯನ್ನು ಬಂದ ಜಾಗಕ್ಕೆ ಹಿಂತಿರುಗಿಸುವುದೇ ಆಗಲಿ ಅದು ಕಾರ್ಯಾಚರಣೆಯ ಯಶಸ್ಸು ಎಂದು ಭಾವಿಸಬೇಕಾಗುತ್ತದೆ ಎಂದರು.

ಕಾರ್ಯಾಚರಣೆ ಮುಗಿದ ಹಿನ್ನೆಲೆ ಶಿಬಿರಕ್ಕೆ ವಾಪಸು ತೆರಳುವ ಮುನ್ನ ಮತ್ತಿಗೋಡು ಸಾಕಾನೆ ಶಿಬಿರದಿಂದ ಆಗಮಿಸಿದ್ದ ಶ್ರೀರಾಮ ಮತ್ತು ಅಜಯ ಸಾಕಾನೆಗಳು ತೋಡಿನಲ್ಲಿ ಕಾವಾಡಿಗರ ಜೊತೆ ಸಂತಸದಲ್ಲಿ ಸ್ನಾನ ಮಾಡಿದವು.

ಈ ಸಂದರ್ಭ ತಾ.ಪಂ. ಮಾಜಿ ಸದಸ್ಯ ಪಲ್ವಿನ್ ಪೂಣಚ್ಚ, ಟಿ. ಶೆಟ್ಟಿಗೇರಿ ವಲಯ ಕಾಂಗ್ರೆಸ್ ಅಧ್ಯಕ್ಷ ತೀತಿರ ಪ್ರಭು ಸುಬ್ಬಯ್ಯ, ಕೊಡಗು ಬೆಳೆಗಾರ ಒಕ್ಕೂಟದ ಮಾಣೀರ ವಿಜಯ ನಂಜಪ್ಪ, ಚೊಟ್ಟೆಯಾಂಡಮಾಡ ವಿಶು, ಶ್ರೀಮಂಗಲ ವನ್ಯಜೀವಿ ವಲಯಾರಣ್ಯಾಧಿಕಾರಿ ಅರವಿಂದ್, ಸಿಬ್ಬಂದಿಗಳು ಹಾಜರಿದ್ದರು.