ಸೋಮವಾರಪೇಟೆ, ಅ. ೧೫: ಅಸ್ಸಾಂ ಮೂಲದ ಕಾರ್ಮಿಕರಿಗೆ ಅಕ್ರಮವಾಗಿ ಗೋಮಾಂಸ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಸೋಮವಾರಪೇಟೆ ಪೊಲೀಸರು ಪಟ್ಟಣದಲ್ಲಿ ಬಂಧಿಸಿದ್ದಾರೆ.

ಹಾಸನ ಜಿಲ್ಲೆ, ಅರಕಲಗೂಡು ತಾಲೂಕಿನ ಇಬ್ಬಡಿ ಗ್ರಾಮದ ಕೇಶವ ಮೂರ್ತಿ ಬಂದಿತ ಆರೋಪಿ. ತನ್ನ ಬೈಕ್‌ನಲ್ಲಿ ೨೦ ಕೆ.ಜಿ. ಗೋಮಾಂಸವನ್ನು ಸೋಮವಾರಪೇಟೆಗೆ ತಂದು ಅಸ್ಸಾಂ ಮೂಲದ ಕಾರ್ಮಿಕರಿಗೆ ಮಾರಾಟ ಮಾಡುತ್ತಿದ್ದ ಸಂದರ್ಭ ಪೊಲೀಸರು ಕಾರ್ಯಾಚರಣೆ ನಡೆಸಿ, ಅರೋಪಿ ಸಹಿತ ಮಾಂಸವನ್ನು ವಶಪಡಿಸಿಕೊಂಡಿದ್ದಾರೆ. ಪಟ್ಟಣದ ಠಾಣೆಯಲ್ಲಿ ಮೊಕದ್ದಮೆ ದಾಖಲಾಗಿದೆ.