ಮಡಿಕೇರಿ, ಅ. ೧೫: ಗಾಳಿಬೀಡು ಗ್ರಾಮದ ಅಡ್ಕದಬಾಣೆಯಲ್ಲಿ ಸ್ನೇಹಿತರ ಯುವಕ ಸಂಘದ ಅಧ್ಯP್ಷÀÀ ಕೋಳುಮುಡಿಯನ ಮೋಹನÀ ನೇತೃತ್ವದಲ್ಲಿ ಆರೋಗ್ಯ ತಪಾಸಣಾ ಶಿಬಿರ ನಡೆಯಿತು. ತಾಲೂಕು ಹಿರಿಯ ಆರೋಗ್ಯ ನಿರೀP್ಷÀಣಾ ಅಧಿಕಾರಿ ಜಿ.ವಿ. ಶ್ರೀನಾಥ್ ಸಂಪನ್ಮೂಲ ಅಧಿಕಾರಿಗಳಾಗಿ ಭಾಗವಹಿಸಿ ಸಾಂಕ್ರಾಮಿಕ ಮತ್ತು ಅಸಾಂಕ್ರಾಮಿಕ ಕಾಯಿಲೆಗಳ ಬಗ್ಗೆ ಹಾಗೂ ಮುಂಜಾಗ್ರತಾ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.

ಶಿಬಿರದಲ್ಲಿ ಮಡಿಕೇರಿ ತಾಲೂಕು ಆರೋಗ್ಯ ಶಿP್ಷÀಣಾಧಿಕಾರಿ ಟಿ.ಎನ್. ಪಾಲಾP್ಷÀ, ಗಾಳಿಬೀಡು ಆಯುಷ್ಮಾನ್ ಆರೋಗ್ಯ ಮಂದಿರದ ಸಮುದಾಯ ಆರೋಗ್ಯ ಅಧಿಕಾರಿ ರಮ್ಯ, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಉಷಾ ಹಾಗೂ ಆಶಾ ಕಾರ್ಯಕರ್ತೆ ಕವಿತ ಹಾಜರಿದ್ದರು. ಆರೋಗ್ಯ ತಪಾಸಣಾ ಶಿಬಿರಕ್ಕೆ ಹಾಜರಾದ ಗ್ರಾಮಸ್ಥರಿಗೆ, ರಕ್ತದೊತ್ತಡ ಮಧುಮೇಹ, ಹಿಮೋಗ್ಲೋಬಿನ್ ತಪಾಸಣೆ ನಡೆಸಲಾಯಿತು. ಶ್ರೀನಿಧಿ, ತ್ರಿವೇಣಿ ಹಾಗೂ ಮಾಧುರಪ್ಪ ಸ್ವಸಹಾಯ ಸಂಘದ ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಗಾಳಿಬೀಡು ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷೆ ರಾಣಿ ಮುತ್ತಣ್ಣ ಸ್ವಾಗತಿಸಿದರೆ, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಉಷಾ ವಂದಿಸಿದರು.