ಕುಶಾಲನಗರ, ಅ.೧೫: ಆಯುಷ್ ಇಲಾಖೆ ಆಸ್ಪತ್ರೆಗೆ ಸಂಬAಧಿಸಿದAತೆ ಕುಶಾಲನಗರದಲ್ಲಿ ರೂ. ೩೦ ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಕಟ್ಟಡಕ್ಕೆ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಮಂತರ್‌ಗೌಡ ಅವರು ಭೂಮಿ ಪೂಜೆ ನೆರವೇರಿಸಿದರು.

ಜಿಲ್ಲಾ ಪಂಚಾಯಿತಿ ವತಿಯಿಂದ ನಡೆಯುವ ಕಾಮಗಾರಿಯಲ್ಲಿ ಆಸ್ಪತ್ರೆ ಆವರಣದಲ್ಲಿ ೨ ಅಂತಸ್ತಿನ ಕಟ್ಟಡ ನಿರ್ಮಾಣವಾಗಲಿದ್ದು ಆಯುರ್ವೇದ ಚಿಕಿತ್ಸೆಗೆ ಸಂಬAಧಪಟ್ಟAತೆ ರೋಗಿಗಳಿಗೆ ಹೆಚ್ಚಿನ ಸವಲತ್ತುಗಳನ್ನು ಒದಗಿಸುವ ಯೋಜನೆ ಇದಾಗಿದೆ ಎಂದು ಶಾಸಕರು ಮಾಹಿತಿ ಒದಗಿಸಿದರು.

ಆಯುರ್ವೇದ ಚಿಕಿತ್ಸೆಗೆ ಹೆಚ್ಚಿನ ಮಂದಿ ಮೈಸೂರು, ಮಂಗಳೂರು ಆಸ್ಪತ್ರೆಗಳನ್ನು ಅವಲಂಬಿಸುತ್ತಿದ್ದು ಮುಂದಿನ ದಿನಗಳಲ್ಲಿ ಕುಶಾಲನಗರದಲ್ಲಿ ಎಲ್ಲಾ ಸೌಲಭ್ಯಗಳೊಂದಿಗೆ ಆಯುರ್ವೇದ ಚಿಕಿತ್ಸೆಗೆ ಅವಕಾಶ ಲಭಿಸಲಿದೆ ಎಂದು ಹೇಳಿದರು.

ಜನರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು. ವೈದ್ಯರು ಸಮರ್ಪಕ ಚಿಕಿತ್ಸೆ ಕಲ್ಪಿಸುವ ನಿಟ್ಟಿನಲ್ಲಿ ಕೆಲಸ ನಿರ್ವಹಿಸಬೇಕು ಎಂದರಲ್ಲದೆ ಗುಣಮಟ್ಟದ ಕಾಮಗಾರಿ ನಡೆಸುವಂತೆ ಸಂಬAಧಿಸಿದ ಇಂಜಿನಿಯರ್ ಮತ್ತು ಗುತ್ತಿಗೆದಾರರಿಗೆ ಕಿವಿ ಮಾತು ಹೇಳಿದರು.

ಆಸ್ಪತ್ರೆಯ ನಿರ್ವಹಣೆಗಾಗಿ ಹೆಚ್ಚುವರಿ ೧೦ ಲಕ್ಷ ರೂಗಳ ಅನುದಾನ ಕಲ್ಪಿಸಲಾಗಿದೆ ಎಂದು ಶಾಸಕರು ತಿಳಿಸಿದರು. ಈ ಸಂದರ್ಭ ಕುಶಾಲನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಪ್ರಮೋದ್ ಮುತ್ತಪ್ಪ, ಪಟ್ಟಣ ಪಂಚಾಯಿತಿ ಸದಸ್ಯ ವಿ.ಎಸ್. ಆನಂದಕುಮಾರ್, ಗ್ಯಾರಂಟಿ ಅನುಷ್ಠಾನ ಸಮಿತಿಯ ತಾಲೂಕು ಅಧ್ಯಕ್ಷರಾದ ವಿ.ಪಿ. ಶಶಿಧರ್, ಜಿಲ್ಲಾ ಆಯುಷ್ ವೈದ್ಯಾಧಿಕಾರಿ ಡಾ. ರೇಣುಕಾ, ಡಾ. ಆಶ್ರಿತ, ಕುಶಾಲನಗರ ನಗರ ಕಾಂಗ್ರೆಸ್ ಅಧ್ಯಕ್ಷÀ ಜೋಸೆಫ್ ವಿಕ್ಟರ್ ಸೋನ್ಸ್, ಸ್ಥಳೀಯ ಜನಪ್ರತಿನಿಧಿಗಳು ಮತ್ತಿತರರು ಇದ್ದರು.