ಚೆಟ್ಟಳ್ಳಿ, ಅ. ೧೫: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಚೆಟ್ಟಳ್ಳಿಯಲ್ಲಿ ತಾ. ೧೭ ರಂದು ಸಂಜೆ ೪ ಗಂಟೆಗೆ ಕಾವೇರಿ ತೀರ್ಥ ವಿತರಣಾ ಕಾರ್ಯಕ್ರಮ ನೆರವೇರಲಿದೆ ಎಂದು ಸಂಘದ ಅಧ್ಯಕ್ಷ ಬಲ್ಲಾರಂಡ ಮಣಿ ಉತ್ತಪ್ಪ ತಿಳಿಸಿದ್ದಾರೆ.

ಸಂಜೆ ಸಂಘದ ಮುಂದಿರುವ ಕಾವೇರಿ ಪ್ರತಿಮೆಗೆ ಅಲಂಕಾರದೊAದಿಗೆ ವಿಶೇಷ ಪೂಜೆ ಸಲ್ಲಿಸಿ ಪವಿತ್ರ ತೀರ್ಥ ಹಾಗೂ ಪ್ರಸಾದ ವಿತರಣೆ ನೆರವೇರಲಿದೆ ಎಂದು ತಿಳಿಸಿದ್ದಾರೆ.