ಮಡಿಕೇರಿ, ಅ. ೧೫: ಮಕ್ಕಂದೂರು ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಮಹಾತ್ಮ ಗಾಂಧಿಜಿಯವರ ೧೫೫ ನೇ ಹುಟ್ಟು ಹಬ್ಬದ ಪ್ರಯುಕ್ತ ವಿಶೇಷ ಗ್ರಾಮ ಸಭೆ ಆಯೋಜಿಸಲಾಗಿತ್ತು. ಗ್ರಾಮ ಸಭೆಯ ಅಧ್ಯಕ್ಷತೆಯನ್ನು ಪಂಚಾಯಿತಿ ಅಧ್ಯಕ್ಷ ಬಿ.ಎನ್. ರಮೇಶ್ ವಹಿಸಿದ್ದರು. ಉಪಾಧಕ್ಷೆ ವಿಮಲ ಬಿ.ಎಸ್., ಸರ್ವ ಸದಸ್ಯರು, ಪಂಚಾಯಿತಿ ಕಾರ್ಯದರ್ಶಿ, ಸಿಬ್ಬಂದಿ ವರ್ಗ, ಸಂಜೀವಿನಿ ಒಕ್ಕೂಟ ಮತ್ತು ವಿವಿಧ ಸಂಘದ ಸದಸ್ಯರು, ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು, ಆಶಾಕಾರ್ಯಕರ್ತೆಯರು, ಗ್ರಾಮಸ್ಥರು ಹಾಜರಿದ್ದರು. ಸ್ವಚ್ಛತಾ ಕಾರ್ಯವನ್ನು ಗ್ರಾಮದ ಉದಯಗಿರಿಯಿಂದ ಹಾಲೇರಿ ಗೇಟ್‌ವರೆಗೆ ಮಾಡಲಾಯಿತು. ಇದೇ ಸಂದರ್ಭ ರಂಗೋಲಿ ಸ್ಪರ್ಧೆ ವಿಜೇತರಿಗೆ ಮತ್ತು ಆಶುಭಾಷಣ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.