ನಾಪೋಕ್ಲು, ಅ. ೧೫ ಕೊಡಗು ಹಕ್ಕು ಸಂರಕ್ಷಣಾ ಸಮಿತಿ ವತಿಯಿಂದ ೨೮ನೇ ವರ್ಷದ ಕಾವೇರಿ ರಥಯಾತ್ರೆ ತಾ. ೧೭ರಿಂದ ೧೮ರ ವರೆಗೆ ನಡೆಯಲಿದೆ ಎಂದು ಕೊಡಗು ಹಕ್ಕು ಸಂರಕ್ಷಣಾ ಸಮಿತಿಯ ಸಂಚಾಲಕ ಬಿದ್ದಾಟಂಡ ರೋಜಿ ಚಿಣ್ಣಪ್ಪ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ದಕ್ಷಿಣ ಕಾಶಿ ಎಂದು ಪ್ರಖ್ಯಾತಿ ಪಡೆದಿರುವ ಕೊಡಗಿನ ಕುಲದೇವತೆ ಕಾವೇರಿ ಮಾತೆಯ ಪ್ರತಿಮೆಯ ಭವ್ಯವಾದ ಪುಷ್ಪಾಲಂಕೃತ ಮೆರವಣಿಗೆಯು ನಾಪೋಕ್ಲುವಿನ ರಾಮಮಂದಿರದಿAದ ಹೊರಡಲಿದ್ದು ಪಾಲೂರಿನ ಮಹಾಲಿಂಗೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಚೇರಂಬಾಣೆ - ಚೆಟ್ಟಿಮಾನಿ ಮಾರ್ಗವಾಗಿ ಭಾಗಮಂಡಲ-ತಲಕಾವೇರಿಗೆ ತೆರಳಲಿದೆ.ತಲಕಾವೇರಿಗೆ ತೆರಳಿ ತೀರ್ಥೋದ್ಭವದ ಬಳಿಕ ವಿವಿಧ ಸ್ಥಳಗಳಲ್ಲಿ ತೀರ್ಥ ವಿತರಿಸಿ ಪಾಲೂರಿನ ಸತ್ಯ ಹರಿಶ್ಚಂದ್ರ ದೇವಾಲಯದ ಕಾವೇರಿ ನದಿಯಲ್ಲಿ ತಾಯಿ ಕಾವೇರಿ ಮಾತೆಯ ಕಳಶ ವಿಸರ್ಜನೆಯೊಂದಿಗೆ ಅಂತ್ಯಗೊಳ್ಳಲಿದೆ ಎಂದರು.

ತಾ. ೧೭ ರಂದು ಬೆಳಿಗ್ಗೆ ೯.೩೦ ಗಂಟೆಗೆ ಭಾಗಮಂಡಲದಿAದ ರಥಯಾತ್ರೆ ಆರಂಭಗೊಳ್ಳಲಿದ್ದು ಚೇರಂಗಾಲ, ಅಯ್ಯಂಗೇರಿ, ಪುಲಿಕೋಟು, ಪೇರೂರು, ಬಲ್ಲಮಾವಟಿ, ಚೋನಕೆರೆ ಮೂಲಕ ಭಕ್ತಾದಿಗಳಿಗೆ ಪುಣ್ಯ ತೀರ್ಥವನ್ನು ವಿತರಣೆ ಮಾಡುತ್ತಾ ಮಧ್ಯಾಹ್ನ ೪.೩೦ ಗಂಟೆಗೆ ನಾಪೋಕ್ಲು ತಲುಪಲಿದೆ ಎಂದು ಮಾಹಿತಿ ನೀಡಿದರು.

ಗೋಷ್ಠಿಯಲ್ಲಿ ಕೊಡಗು ಹಕ್ಕು ಸಂರಕ್ಷಣಾ ಸಮಿತಿಯ ಪ್ರಧಾನ ಕಾರ್ಯದರ್ಶಿ ಕಲಿಯಾಟಂಡ ಮಯ್ಯು ದೇವಯ್ಯ, ಪದಾಧಿಕಾರಿಗಳಾದ, ಬಿದ್ದಾಟಂಡ ಮಮತಾ ಚಿಣ್ಣಪ್ಪ, ಕಲಿಯಾಟಂಡ ಸುಮಿತ್ರ ದೇವಯ್ಯ, ಇದ್ದರು.