ಚೆಯ್ಯಂಡಾಣೆ, ಅ. ೧೭: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಸೇತುವೆಯಿಂದ ಕೆಳಗೆ ಬಿದ್ದ ಪರಿಣಾಮ ಕೇರಳದ ಕಾಞಂಗಾಡ್ ಮೂಲದ ನಾಲ್ವರು ಪ್ರಯಾಣಿಕರು ಗಾಯಗೊಂಡ ಘಟನೆ ಮದೆ ಗ್ರಾಮದ ದೇವರಕೊಲ್ಲಿಯಲ್ಲಿ ಗುರುವಾರ ಮುಂಜಾನೆ ಸಂಭವಿಸಿದೆ.

ಸAಪಾಜೆ ರಸ್ತೆಗಾಗಿ ಮಡಿಕೇರಿಗೆ ತೆರಳುತ್ತಿದ್ದ ಕಾರು ಮದೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೇವರಕೊಲ್ಲಿಯಲ್ಲಿಯ ಹೋನೆಸ್ಟ್ ಸರ್ವಿಸ್ ಸ್ಟೇಷನ್ ಬಳಿ ಬೆಳಿಗ್ಗಿನ ಜಾವ ಮೂರು ಗಂಟೆ ವೇಳೆಗೆ ಚಾಲಕನ ನಿಯಂತ್ರಣ ತಪ್ಪಿ ಸೇತುವೆಯಿಂದ ಕೆಳಗೆ ಬಿದ್ದಿದೆ. ಇದರಿಂದ ಚಾಲಕ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ.

ಶಬ್ದ ಕೇಳಿದ ಸ್ಥಳೀಯ ರಾದ ರಿಯಾಜ್ ಎಂಬವರು ನೆರೆಮನೆಯ ವರನ್ನು ಸೇರಿಸಿ ಗಾಯಾಳು ಗಳನ್ನು ಸಂಪಾಜೆ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದಾರೆ. ಸಂಪಾಜೆ ಯಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದು ಗಾಯಾಳುಗಳು ತಮ್ಮ ಊರಾದ ಕಾಞಂಗಾಡ್‌ಗೆ ತೆರಳಿದ್ದಾರೆ. ಅವಘಡದಿಂದ ಕಾರು ಸಂಪೂರ್ಣ ಜಖಂಗೊAಡಿದ್ದು ಪ್ರಯಾಣಿಕರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.