ಕೂಡಿಗೆ, ಅ. ೨೦: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಣಿವೆಯ ಭುವನಗಿರಿ ಗ್ರಾಮದಿಂದ ಮಸಗೋಡು-ಯಲಕನೂರು-ಕಣಿವೆ ಮಾರ್ಗದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ರೂ. ೧೫ ಕೋಟಿ ಅನುದಾನ ಬಿಡುಗಡೆಯಾಗಿದೆ ಎಂದು ಮಡಿಕೇರಿ ಕ್ಷೇತ್ರ ಶಾಸಕ ಡಾ.ಮಂತರ್ ಗೌಡ ತಿಳಿಸಿದರು.

ಹಾರಂಗಿಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಕಳೆದ ೨೫ ವರ್ಷಗಳಿಂದ ಈ ಮಾರ್ಗದ ರಸ್ತೆಯು ತೀರಾ ಹದಗೆಟ್ಟಿದ್ದು, ಈ ವ್ಯಾಪ್ತಿಯ ಹತ್ತಕ್ಕೂ ಅಧಿಕ ಗ್ರಾಮಗಳ ನಿವಾಸಿಗಳಿಗೆ ತೀವ್ರತರವಾದ ಅನಾನುಕೂಲ ಉಂಟಾಗಿತ್ತು. ಇದೀಗ ಸರಕಾರಕ್ಕೆ ಸಲ್ಲಿಸಿದ್ದ ಪ್ರಸ್ತಾವನೆ ಅನುಮೋದನೆಗೊಂಡಿದ್ದು ರಸ್ತೆ ಅಭಿವೃದ್ಧಿಗೆ ರೂ. ೧೫ ಕೋಟಿ ಅನುದಾನ ಒದಗಿಸಲಾಗಿದೆ ಎಂದು ತಿಳಿಸಿದರು.

ಈ ಸಂದರ್ಭ ಕೂಡಿಗೆ ಗ್ರಾಮ ಪಂಚಾಯಿತಿ ಸದಸ್ಯ, ಕೂಡಿಗೆ ವಲಯ ಕಾಂಗ್ರೆಸ್ ಅಧ್ಯಕ್ಷ ಅನಂತ, ಹೊಸಳ್ಳಿ ಭಾಗದ ಕಾಂಗ್ರೆಸ್ ಮುಖಂಡ ಸತೀಶ್, ರತನ್, ಮತ್ತಿತರರು ಇದ್ದರು.