ಮಡಿಕೇರಿ, ಅ. ೨೦: ತಲಕಾವೇರಿಯಿಂದ ಪವಿತ್ರ ಕಾವೇರಿ ತೀರ್ಥ ಕಾಶಿ ವಿಶ್ವನಾಥನ ಸನ್ನಿಧಿಗೆ ತಲುಪಿದ್ದು, ಕೊಡಗಿನ ಭಕ್ತರ ಮೂಲಕ ಕಾಶಿ ವಿಶ್ವನಾಥನಿಗೆ ಅಭಿಷೇಕಗೊಂಡಿದೆ.

ಕೊಡವ ರೈಡರ್ಸ್ ಕ್ಲಬ್ ಸಂಸ್ಥಾಪಕ ಹಾಗೂ ಅಖಿಲ ಕೊಡವ ಸಮಾಜ ಯೂತ್ ವಿಂಗ್ ಸಂಘಟನಾ ಕಾರ್ಯದರ್ಶಿ ಅಜ್ಜಿಕುಟ್ಟಿರ ಪೃಥ್ವಿ ಸುಬ್ಬಯ್ಯ ತಮ್ಮ ಕುಟುಂಬದೊAದಿಗೆ ಕಾಶಿಗೆ ತೆರಳಿ, ಕೊಡಗು ಜಿಲ್ಲೆಯ ರಾಷ್ಟಿçÃಯ ಸ್ವಯಂ ಸೇವಕ ಸಂಘದ ಪ್ರಮುಖರಾದ ಚಕ್ಕೆರ ಮನು ಅವರ ಮೂಲಕ ಅಲ್ಲಿನ ಆರ್‌ಎಸ್‌ಎಸ್ ಪ್ರಮುಖರಾದ ರಮೇಶ್ ಕುಮಾರ್ ಹಾಗೂ ದೀನ್ ದಯಾಳ್ ಪಾಂಡೆ ಅವರನ್ನು ಸಂಪರ್ಕಿಸಿ ಸಹಕಾರದಿಂದ ಕೊಡವ ಉಡುಪಿನಲ್ಲಿ ಕಾವೇರಿ ತೀರ್ಥವನ್ನು ನೇರವಾಗಿ ಕಾಶಿ ವಿಶ್ವನಾಥನಿಗೆ ಅಭಿಷೇಕ ಮಾಡಿದ್ದಾರೆ. ಅಲ್ಲದೆ, ಕೊಡವ ಜನಾಂಗದ ಹಾಗೂ ಕೊಡಗಿನ ಸಮಸ್ಯೆಗಳ ಪರಿಹಾರ ದೊಂದಿಗೆ ಶ್ರೇಯೋಭಿವೃದ್ಧಿಗಾಗಿ ಕಾಶಿ ವಿಶ್ವನಾಥನಲ್ಲಿ ಪ್ರಾರ್ಥಿಸಲಾಯಿತು ಎಂದು ಅಜ್ಜಿಕುಟ್ಟಿರ ಪೃಥ್ವಿ ಸುಬ್ಬಯ್ಯ ತಿಳಿಸಿದ್ದಾರೆ. ಸೋಮವಾರ ಅಯೋಧ್ಯೆಗೆ ತೆರಳಿ ಬಾಲ ರಾಮನಿಗೆ ಕಾವೇರಿ ತೀರ್ಥವನ್ನು ತಲುಪಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ. ಈ ಸಂದರ್ಭ ಪೃಥ್ವಿ ಸುಬ್ಬಯ್ಯ ಅವರ ಕುಟುಂಬಸ್ಥರು ಹಾಜರಿದ್ದರು.