ವೀರಾಜಪೇಟೆ, ಅ. ೧೯: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವೀರಾಜಪೇಟೆ ತಾಲೂಕು ಶಾಖೆಯ ೨೦೨೪-೨೯ನೇ ಅವಧಿಯ ಅಧೀನ ಶಾಖೆಗಳ ಚುನಾವಣೆ ತಾ. ೨೮ ರಂದು ನಡೆಯಲಿದೆ.

ಈಗಾಗಲೇ ಚುನಾವಣಾ ವೇಳಾಪಟ್ಟಿ ಹಾಗೂ ಅಧಿಸೂಚನೆ ಗಳನ್ನು ಹೊರಡಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವೀರಾಜಪೇಟೆ ತಾಲೂಕು ಚುನಾವಣಾಧಿಕಾರಿ ಎಂ.ಕೆ. ರೋಹಿತ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಮಪತ್ರ ಸಲ್ಲಿಸಲು ಆರಂಭದ ದಿನಾಂಕ ತಾ. ೯ ರಿಂದ ೧೮ ರ ತನಕ ನಾಮಪತ್ರ ಸಲ್ಲಿಸಲು ಅವಕಾಶವಿತ್ತು. ಈಗಾಗಲೇ ಪ್ರಕ್ರಿಯೆ ಆರಂಭಗೊAಡಿದ್ದು, ತಾ. ೨೧ ರ ಸಂಜೆ ೪.೩೦ ರವರೆಗೆ ನಾಮಪತ್ರ ಹಿಂಪಡೆಯಲು ಅವಕಾಶವಿದ್ದು, ಅಭ್ಯರ್ಥಿಗಳ ಹೆಸರು ಪ್ರಕಟಣೆ ಸಂಜೆ ೫.೩೦ಕ್ಕೆ ನಡೆಯಲಿದೆ. ಚುನಾವಣೆಯನ್ನು ತಾ. ೨೮ ರಂದು ನಡೆಸಲಾಗುವುದು. ಚುನಾವಣೆ ಮುಗಿದ ಬಳಿಕ ಮತ ಎಣಿಕಾ ಕಾರ್ಯ ನಡೆಯಲಿದೆ ಎಂದು ಹೇಳಿದರು. ಗೋಷ್ಠಿಯಲ್ಲಿ ಸಹಾಯಕ ಚುನಾವಣಾಧಿಕಾರಿ ಎ.ಟಿ. ಬಾಲಕೃಷ್ಣ ಉಪಸ್ಥಿತರಿದ್ದರು.