ಗುಡ್ಡೆಹೊಸೂರು, ಅ. ೨೦: ಬೆಂಗಳೂರಿನಲ್ಲಿ ಪವರ್ ಟಿ.ವಿ ಯ ೬ನೇ ವರ್ಷದ ವಾರ್ಷಿಕೋತ್ಸವ ಸಂದರ್ಭ ಉದ್ಯಮಿ, ಸಮಾಜಸೇವಕ ಹಾಗೂ ದಾನಿ ನಾಪಂಡ ಮುತ್ತಪ್ಪ ಅವರಿಗೆ ಉತ್ತಮ ಸಮಾಜ ಸೇವಕ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಮುತ್ತಪ್ಪ ಅವರ ಸಾಮಾಜಿಕ ಸೇವೆ ಗುರುತಿಸಿ ಪವರ್ ಟಿ.ವಿ. ಈ ಪ್ರಶಸ್ತಿ ನೀಡಿದೆ. ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಪ್ರಶಸ್ತಿ ಪ್ರದಾನ ಮಾಡಿದರು.