ಕೂಡಿಗೆ, ಅ. ೨೦: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭುವನಗಿರಿ ಗ್ರಾಮದಲ್ಲಿರುವ ಕುಶಾಲನಗರದ ಕಸ ವಿಲೇವಾರಿ ಘಟಕದ ಕೇಂದ್ರಕ್ಕೆ ತೆರಳುವ ರಸ್ತೆಯು ತೀರಾ ಹಾಳಾಗಿದ್ದು, ರಸ್ತೆಯನ್ನು ಕುಶಾಲನಗರ ಪುರಸಭೆಯ ೧೫ನೇ ಹಣಕಾಸು ಯೋಜನೆಯ ಅನುದಾನದ ರೂ. ೨೫ ಲಕ್ಷ ವೆಚ್ಚದ ಕಾಮಗಾರಿಗೆ ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತÀರ್ ಗೌಡ ಭೂಮಿ ಪೂಜೆಯನ್ನು ನೆರವೇರಿಸಿದರು. ಅದರ ಹಿನ್ನೆಲೆಯಲ್ಲಿ ಈಗಾಗಲೇ ರಸ್ತೆಯ ಕಾಮಗಾರಿಯು ಆರಂಭಗೊAಡಿದೆ.

ಕಾಮಗಾರಿಯ ಸ್ಧಳಕ್ಕೆ ಕುಶಾಲನಗರ ಪುರಸಭೆ ಮುಖ್ಯಾಧಿಕಾರಿ ಕೃಷ್ಣ ಪ್ರಸಾದ್, ಅರೋಗ್ಯ ಅಧಿಕಾರಿ ಉದಯ್ ಕುಮಾರ್ ಇಂಜಿನಿಯರ್ ರಂಗರಾಮು ಭೇಟಿ ನೀಡಿ ಪರಿಶೀಲನೆ ನಡೆಸಿದರು.