ಸೋಮವಾರಪೇಟೆ, ಅ. ೨೧: ಲಿಂಗ ತಾರತಮ್ಯಕ್ಕೆ ಕಡಿವಾಣ ಹಾಕಲು, ಹೆಣ್ಣು ಭ್ರೂಣ ಹತ್ಯೆ ತಡೆಯಲು ಎಲ್ಲರೂ ಕೈಜೋಡಿಸಬೇಕು. ಯಾವುದೋ ಒಂದು ಮನೆಯಲ್ಲಿ ಹೆಣ್ಣು ಮಗು ಜನಿಸಿದಾಗ ಅಂತಹ ಮನೆಗಳಿಗೆ ಅಂಗನವಾಡಿ ಕಾರ್ಯಕರ್ತೆಯರು ತೆರಳಿ ಒಂದು ಗುಲಾಬಿ ಹೂ ನೀಡುವ ಮೂಲಕ ಹೆಣ್ಣಿನ ಮಹತ್ವವನ್ನು ತಿಳಿಸಿದರೆ ಧನಾತ್ಮಕ ಬದಲಾವಣೆ ಕಾಣಬಹುದು ಎಂದು ಶಿಶು ಅಭಿವೃದ್ಧಿ ಯೋಜನಾ ಇಲಾಖೆಯ ಮೇಲ್ವಿಚಾರಕಿ ಸಾವಿತ್ರವ್ವ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಸ್ಥಳೀಯ ಸ್ತಿçà ಶಕ್ತಿ ಭವನದಲ್ಲಿ ಆಯೋಜಿಸಿದ್ದ ‘ಬೇಟಿ ಬಚಾವೋ-ಬೇಟಿ ಪಡಾವೊ’ ಕಾರ್ಯಕ್ರಮದಡಿ, ಅಂತರರಾಷ್ಟಿçÃಯ ಸಾಕ್ಷರತಾ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಮೊದಲಿಗೆ ತಳಮಟ್ಟದಿಂದ ಹೆಣ್ಣು ಮಕ್ಕಳನ್ನು ಪ್ರೋತ್ಸಾಹಿಸುವ ಕಾರ್ಯ ಮಾಡಬೇಕಾಗಿದ್ದು, ಕೇಂದ್ರ ಸರ್ಕಾರದ ಪೋಷಣಾ ಅಭಿಯಾನ ಯೋಜನೆಯನ್ನು ಮನೆ ಮನೆಗೆ ತಲುಪಿಸುವ ಕೆಲಸವನ್ನು ಅಂಗನವಾಡಿ ಕಾರ್ಯಕರ್ತೆಯರು ಮಾಡಬೇಕಾಗಿದೆ ಎಂದು ಹೇಳಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಂಪನ್ಮೂಲ ವ್ಯಕ್ತಿ ಎಸ್.ಆರ್. ಕೇಶಿನಿ ಅವರು ಮಾತನಾಡಿ, ಕೇಂದ್ರ ಸರ್ಕಾರ ಪುರಸ್ಕೃತ ಯೋಜನೆಯಲ್ಲಿ ಬೇಟಿ ಬಚಾವೋ- ಬೇಟಿ ಪಡಾವೊ ಕಾರ್ಯಕ್ರಮದಡಿಯಲ್ಲಿ ಹೆಣ್ಣುಮಕ್ಕಳು ಮತ್ತು ಮಹಿಳೆಯರು ಶಿಕ್ಷಣವಂತರಾಗಬೇಕು. ಓದುವ ಹಾಗು ಬರೆಯುವ ಸಾಮರ್ಥ್ಯವನ್ನು ಹೊಂದಬೇಕು ಎಂದು ಹೇಳಿದರು.

ಇದರಿಂದ ಸಮಾಜದಲ್ಲಿ ಎಲ್ಲಾ ವರ್ಗದವರೊಂದಿಗೆ ಬೆರೆಯುವ ಮತ್ತು ಇತರರೊಂದಿಗೆ ಸಂವಹನ ನಡೆಸಲು ಅನುಕೂಲವಾಗುತ್ತದೆ ಎಂದು ಅಭಿಪ್ರಾಯಿಸಿದರು.

ಕಾರ್ಯಕ್ರಮದಲ್ಲಿ ಮಾತೃವಂದನಾ ಯೋಜನೆಯ ಜಿಲ್ಲಾ ಸಂಯೋಜಕರಾದ ನವ್ಯ, ಪೋಷಣಾ ಅಭಿಯಾನ ಯೋಜನೆ ತಾಲೂಕು ಸಂಯೋಜಕರಾದ ರಂಜಿತಾ ಹಾಗೂ ಸೋಮವಾರಪೇಟೆ ತಾಲೂಕಿನ ಗೌಡಳ್ಳಿ, ಕೊಡ್ಲಿಪೇಟೆ, ಸುಂಟಿಕೊಪ್ಪ, ಶನಿವಾರಸಂತೆ ಅಂಗನವಾಡಿ ಕಾರ್ಯಕರ್ತೆಯರು ಭಾಗವಹಿಸಿದ್ದರು.