ಕೂಡಿಗೆ, ಅ. ೨೧: ಕುಶಾಲನಗರ ಹಾರಂಗಿ ಮುಖ್ಯರಸ್ತೆಯ ಸಮೀಪದಲ್ಲಿರುವ ಬೆಂಡೆಬೆಟ್ಟ ಗ್ರಾಮದ ರಸ್ತೆಯ ಬದಿಯಲ್ಲಿ ಬೆಳಿಗ್ಗೆ ವೇಳೆ ಒಂಟಿ ಕಾಡಾನೆ ಕಾಣಿಸಿಕೊಂಡಿದ್ದು, ಗ್ರಾಮಸ್ಥರು ಭಯಾಭೀತರಾಗಿದ್ದಾರೆ. ಈ ಬಗ್ಗೆ ಗ್ರಾಮಸ್ಥರು ಅರಣ್ಯ ಇಲಾಖೆಯ ಗಮನಕ್ಕೆ ತಂದ ಹಿನ್ನೆಲೆಯಲ್ಲಿ ಕುಶಾಲನಗರ ವಲಯ ಅರಣ್ಯ ಇಲಾಖೆ ವ್ಯಾಪ್ತಿಯ ಅತ್ತೂರು ಉಪವಲಯ ಅರಣ್ಯಾಧಿಕಾರಿ ಉಮೇಶ್ ನೇತೃತ್ವದಲ್ಲಿ ಸಿಬ್ಬಂದಿ ಕಾಡಾನೆಯನ್ನು ಕಾಡಿನತ್ತ ಓಡಿಸಲು ಮುಂದಾದರು.