ಮಡಿಕೇರಿ, ಅ. ೨೧: ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ಕೊಡಗು ಜಿಲ್ಲಾ ಘಟಕದಿಂದ ತಾ.೨೪ ರಂದು ವೀರಾಜಪೇಟೆಯ ಜೂನಿಯರ್ ಕಾಲೇಜು ಮೈದಾನದಲ್ಲಿ ವಾರ್ಷಿಕ ಕ್ರೀಡಾಕೂಟ ಮತ್ತು ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಕೊಟ್ಟುಕತ್ತೀರ ಪಿ. ಸೋಮಣ್ಣ ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಸಾಲಿನ ಕ್ರೀಡಾಕೂಟದಲ್ಲಿ ಮಾಜಿ ಸೈನಿಕರುಗಳಿಗೆ, ವೀರ ನಾರಿಯರಿಗೆ, ವಿಧವೆಯರಿಗೆ, ಅವಲಂಬಿತರಿಗೆ ಆಟೋಟ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಈ ಬಾರಿ ಕ್ರೀಡಾ ಕೂಟದಲ್ಲಿ ಅರೆಸೇನಾ ಪಡೆಗಳ ಮಾಜಿ ಯೋಧರು ಮತ್ತು ಅವರ ಕುಟುಂಬಸ್ಥರಿಗೂ ಅವಕಾಶವನ್ನು ಕಲ್ಪಿಸಲಾಗಿದೆ ಎಂದರು. ಕ್ರೀಡಾಕೂಟಕ್ಕೆ ಬೆಳಗ್ಗೆ ೯ ಗಂಟೆಗೆ ಅರಮೇರಿ ಕಳಂಚೇರಿ ಮಠದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಚಾಲನೆ ನೀಡಲಿದ್ದಾರೆ. ಮಧ್ಯಾಹ್ನದವರೆಗೆ ವಿವಿಧ ಆಟೋಟ ಸ್ಪರ್ಧೆಗಳು ನಡೆಯಲಿವೆೆ. ಮಧ್ಯಾಹ್ನದ ಬಳಿಕ ಸಮಾರೋಪ ಸಮಾರಂಭವನ್ನು ಆಯೋಜಿಸಲಾಗಿದೆ. ಕ್ರೀಡಾಕೂಟ ನಡೆಯುವ ಸಂದರ್ಭದಲ್ಲೇ ಬೆಂಗಳೂರಿನ ಆಸ್ಟರ್ ಆಸ್ಪತ್ರೆಯ ಸಹಕಾರದೊಂದಿಗೆ ಉಚಿತ ಆರೋಗ್ಯ ತಪಾಸಣೆÉಯನ್ನು ಏರ್ಪಡಿಸಲಾಗಿದೆ. ಇಸಿಜಿ ಪರೀಕ್ಷಾ ಸೌಲಭ್ಯವೂ ಇರಲಿದೆ.

ಭಾರತೀಯ ಸೈನ್ಯದ ವಿವಿಧ ವಿಭಾಗಗಳಲ್ಲಿ ಸೇವೆ ಸಲ್ಲಿಸಿರುವ ಎಲ್ಲರೂ ಒಂದೇ. ಈ ಹಿನ್ನೆಲೆಯಲ್ಲಿ ಕ್ರೀಡಾಕೂಟಕ್ಕೆ ಜಿಲ್ಲೆಯ ಎಲ್ಲಾ ಮಾಜಿ ಯೋಧರ ಸಂಘಟನೆಗಳಿಗೆ ಆಹ್ವಾನವನ್ನು ನೀಡಲಾಗಿದೆ. ಎಲ್ಲಾ ಮಾಜಿ ಯೋಧರು, ಅರೆಸೇನಾ ಪಡೆಯ ಯೋಧರು ಮತ್ತು ಅವರ ಕುಟುಂಬಸ್ಥರು ಪಾಲ್ಗೊಳ್ಳು ವಂತೆ ಕೋರಿದರು. ಎಸ್‌ಬಿಐ ಸೇರಿದಂತೆ ವಿವಿಧ ಸಂಸ್ಥೆಗಳು ಕ್ರೀಡಾಕೂಟದ ಸಂದರ್ಭ, ಮಾಜಿ ಸೈನಿಕರಿಗೆ ಸಂಬAಧಿಸಿದAತೆ, ಅವುಗಳ ವ್ಯಾಪ್ತಿಯಲ್ಲಿ ಬರುವ ಯಾವುದೇ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ಪ್ರಯತ್ನ ನಡೆಸಲಿವೆ. ಜಿಲ್ಲೆಯ ಬಹುತೇಕ ಮಾಜಿ ಯೋಧÀರ ಪಿಂಚಣಿ ಎಸ್‌ಬಿಐ ಮೂಲಕ ಬರುತ್ತದೆ. ಈ ಹಿನ್ನೆಲೆ ಪಿಂಚಣಿ ಕುರಿತ ಸಮಸ್ಯೆಗಳಿದ್ದಲ್ಲಿ ಎಸ್‌ಬಿಐ ಅಧಿಕಾರಿ ಗಳೊಂದಿಗೆ ಮಾತನಾಡಿ, ಬಗೆಹರಿಸಿಕೊಳ್ಳಲು ಅವಕಾಶವಿದೆ ಎಂದು ತಿಳಿಸಿದರು.

ಮಾಜಿ ಸೈನಿಕರ ಸಂಘದ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಹಾಗೂ ಕ್ರೀಡಾಕೂಟದ ಸಂಚಾಲಕ ಕುಟ್ಟಂಡ ಲವ ಪೊನ್ನಪ್ಪ ಮಾತನಾಡಿ, ಕ್ರೀಡಾಕೂಟದಲ್ಲಿ ೩೦ ಆಟೋಟ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಹಗ್ಗಜಗ್ಗಾಟ, ರಿಲೇ ಮೊದಲಾದ ಗುಂಪು ಸ್ಪರ್ಧೆಗಳು ತಾಲೂಕು ತಂಡಗಳ ನಡುವೆ ನಡೆಯಲಿದೆ. ಉಳಿದಂತೆ ಇತರೆ ಸ್ಪರ್ಧೆಗಳಲ್ಲಿ ಎಲ್ಲರೂ ಪಾಲ್ಗೊಳ್ಳಬಹುದೆಂದು ತಿಳಿಸಿದರು. ಸೈನ್ಯ ಸೇರ್ಪಡೆಗೆ ಅನುಕೂಲವಾಗುವಂತೆ ೮೦೦ ಮೀ. ಓಟದ ಸ್ಪರ್ಧೆಯನ್ನು ಆಯೋಜಿಸಲಾಗಿದೆ ಎಂದರು.

ಮಾಜಿ ಯೋಧರ ಸಂಘ ಅರೆ ಸೇನಾಪಡೆಯ ಸಂಚಾಲಕರಾದ ನೂರೇರ ಭೀಮಯ್ಯ ಮಾತನಾಡಿ, ಇಲ್ಲಿಯವರೆಗೆ ಇಂತಹ ಯಾವುದೇ ಕ್ರೀಡಾಕೂಟಗಳಿಗೆ ಅರೆಸೇನಾಪಡೆಯ ನಿವೃತ್ತ ಯೋಧರನ್ನು ಯಾವುದೇ ಸಂಘಟನೆಗಳು ಆಹ್ವಾನಿಸಿರಲಿಲ್ಲ. ಇದೇ ಮೊದಲ ಬಾರಿಗೆ ಅಖಿಲ ಕರ್ನಾಟಕ ಮಾಜಿ ಯೋಧರ ಸಂಘದ ಕೊಡಗು ಘಟಕ ತಮ್ಮನ್ನು ಆಹ್ವಾನಿಸಿದ್ದು, ಕ್ರೀಡಾಕೂಟದ ಯಶಸ್ಸಿಗೆ ಪೂರ್ಣ ಸಹಕಾರ ನೀಡಲಾಗುತ್ತದೆಂದರು. ಅಂತರಾಷ್ಟಿçÃಯ ಮಟ್ಟದ ಅಥ್ಲಿಟ್, ಮಾಜಿ ಯೋಧರು ಹಾಗೂ ಕ್ರೀಡಾ ಸಂಚಾಲಕರಾದ ಹೊಸೊಕ್ಲು ಚಿಣ್ಣಪ್ಪ ಮಾತನಾಡಿ, ಸಂಘದ ಮೂಲಕ ಸೈನ್ಯ ಸೇರ್ಪಡೆ ಬಯಸುವ ಮಕ್ಕಳಿಗೆ ತರಬೇತಿ, ಮಾಜಿ ಯೋಧರ ಸಂಕಷ್ಟಗಳ ಪರಿಹಾರಕ್ಕೆ ಸಂಘದ ಮೂಲಕ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಾ ಬರಲಾಗುತ್ತಿದೆ ಎಂದರು. ಅಂತರಾಷ್ಟಿçÃಯ ಕ್ರೀಡಾಪಟು ಮುಲ್ಲೇರ ಪೊನ್ನಮ್ಮ ಮಾತನಾಡಿ, ಸಂಘದಿAದ ಮಾಜಿ ಸೈನಿಕರಿಗೆ ಸಾಕಷ್ಟು ಅನುಕೂಲವಾಗಿದೆ ಎಂದರು.