ಗೋಣಿಕೊಪ್ಪಲು, ಅ. ೨೧: ಜನಪದ ಕಲೆ ಸಂಸ್ಕೃತಿ ಅನನ್ಯವಾದದ್ದು. ಪ್ರಾಚೀನ ಜನಪದ ಬದುಕಿನ ಆಳಕ್ಕಿಳಿದು ಅಧ್ಯಯನ ಮಾಡಿದರೆ ಅನೇಕ ಮಹತ್ವದ ವಿಚಾರಗಳು ನಮ್ಮ ಅರಿವಿಗೆ ಬರುತ್ತವೆ. ವಿವಿಧ ಪ್ರದೇಶಗಳ ಜಾನಪದೀಯ ಅಂಶಗಳನ್ನು ಕಲೆಹಾಕಿ ಪ್ರಸ್ತುತ ಕಾಲಘಟ್ಟಕ್ಕೆ ಇವನ್ನು ಸಮನ್ವಯ ಮಾಡಿಕೊಳ್ಳಬೇಕಾದ ಅಗತ್ಯವಿದೆ. ಈ ನಿಟ್ಟಿನಲ್ಲಿ ಡಾ. ಕೆ. ಕಮಲಾಕ್ಷ ಅವರ ಕಾರ್ಯ ಅಭಿನಂದನೀಯ ಎಂದು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ ಕೇಶವ ಕಾಮತ್ ಮೆಚ್ಚುಗೆ ವ್ಯಕ್ತಪಡಿಸಿದರು.

ಗೋಣಿಕೊಪ್ಪಲು ಬಳಿಯ ಅರವತ್ತೊಕ್ಲುವಿನ ಲಕ್ಷೆö್ಮÃಶ್ವರ ಎಸ್ಟೇಟ್‌ನಲ್ಲಿ ಸಾಹಿತಿ, ನಿವೃತ್ತ ಪ್ರಾಂಶುಪಾಲರಾದ ಡಾ. ಕಮಲಾಕ್ಷ ಕೆ. ಅವರ ಕೃತಿ ‘ಭೂಮಿಯಿಂದ ಮೊಳೆತು’ ಬಂದ ಪಾಟ್ ಕಥೆಗಳು ಕನ್ನಡ ಕೃತಿಯ ಬಿಡುಗಡೆ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಡಾ. ಕಮಲಾಕ್ಷ ಕೆ. ಅವರು ಈ ಹಿಂದೆ ಬರೆದ "ಕೇರಳದ ಜನಪದ ವೀರ ತಚ್ಚೋಳಿ ಒದೆನನ್" ಹಾಗೂ "ಅಂಕ ಕಲಿಗಳ ವಿರಗಾಥೆ" ಅನುವಾದಿತ ಕಲಾಕೃತಿಗಳು ಸಹ ಸಂಗ್ರಹ ಯೋಗ್ಯ ಪುಸ್ತಕಗಳಾಗಿವೆ. ಸಾಹಿತ್ಯ ಕೃತಿಗಳ ಅನುವಾದ ಸುಲಭ ಸಾಧ್ಯ ಅಲ್ಲ. ಎರಡು ಭಾಷೆಗಳ ಹಿಡಿತ, ಜೊತೆಗೆ ಮೂಲ ಕೃತಿ ರಚನಕಾರರ ರಚನೆ ಕುರಿತ ಮನಸ್ಥಿತಿ ಇವೆಲ್ಲದರ ಮೇಲೆ ಹಿಡಿತ ಬೇಕಿದ್ದು ಡಾ.ಕೆ ಕಮಲಾಕ್ಷ ಅವರು ಈ ಬಗ್ಗೆ ನುರಿತರಿದ್ದು ಕೃತಿ ರಚನೆ ಮಾಡಿದ್ದಾರೆ ಎಂದು ಹೇಳಿದರು.

ಬಿಡುಗಡೆ ಸಮಾರಂಭದ ಮುಖ್ಯ ಅತಿಥಿಯಾಗಿ ಪಾಲ್ಗೊಂಡ ಬೆಂಗಳೂರಿನ ‘ದೃಶ್ಯ’ ರಂಗತAಡದ ಸಂಸ್ಥಾಪಕಿ ಹಾಗೂ ನಿರ್ದೇಶಕಿ ಡಾ. ದಾಕ್ಷಾಯಿಣಿ ಭಟ್ ಅವರು ರಂಗಕಲೆಯಲ್ಲಿ ಜನಪದ ಕಥೆಗಳನ್ನು ಬಳಸಿಕೊಳ್ಳುವಲ್ಲಿನ ಅಗತ್ಯತೆಗಳನ್ನು ವಿವರಿಸಿದರು.

ಕೇಂದ್ರ ಸಾಹಿತ್ಯ ಅಕಾಡೆಮಿಯ ಬೆಂಗಳೂರು ವಲಯ ನಿವೃತ್ತ ಕಾರ್ಯದರ್ಶಿ ಮಹಾಲಿಂಗೇಶ್ವರ ಎಸ್.ಪಿ. ಮಾತನಾಡಿದರು. ಸುಳ್ಯದ ಉಪನ್ಯಾಸಕ ಲೇಖಕ ಡಾ.ಸುಂದರ ಕೆನಾಜೆ ಅವರು ಜಾನಪದ ವೈವಿಧ್ಯ, ಭಾಷಾ ವೈವಿಧ್ಯ, ವಿವಿಧ ಸಾಂಸ್ಕೃತಿಕ ಮಜಲುಗಳು ಎಲ್ಲವೂ ಸೇರಿ ಹೇಗೆ ನಮ್ಮ ಸಮಾಜವನ್ನು ಆರೋಗ್ಯವಂತವಾಗಿಡಲು ಸಾಧ್ಯ ಎಂಬುದರ ಕುರಿತು ತಿಳಿಸಿದರು. ಲಕ್ಷೆö್ಮÃಶ್ವರ ಎಸ್ಟೇಟ್ ಮಾಲೀಕ ಹಾಗೂ ಹಾಗೂ ಕೃತಿಗೆ ಆರ್ಥಿಕ ಸಹಾಯ ನೀಡಿದ್ದ ಪಿ.ಆರ್ ಗಾಂಧಿರಾವ್ ರವರರು ಕೃತಿ ಬಿಡುಗಡೆ ಮಾಡಿದರು. ಇತ್ತೀಚಿನ ಪ್ರಶಸ್ತಿ ಪುರಸ್ಕೃತ ಕನ್ನಡ ಚಲನಚಿತ್ರ "ಡೇರ್ ಡೆವಿಲ್ ಮುಸ್ತಫಾ" ಚಿತ್ರ ತಂಡದ ನಾಯಕ ನಟ ನಿರ್ದೇಶಕ ಮತ್ತು ಇತರ ಕಲಾವಿದರು ಕಾರ್ಯಕ್ರಮಕ್ಕೆ ವಿಶೇಷ ಕಳೆ ನೀಡಿದರು. ಜಯಶ್ರೀ ಗಣೇಶ ಕಾರ್ಯಕ್ರಮ ನಿರ್ವಹಿಸಿದರು. ಚಲನಚಿತ್ರ ಸಂಗೀತ ಶಬ್ದ ಸಂಯೋಜಕ ಸ್ವಸ್ತಿಕ್ ಕಾರೆಕಾಡು ಮತ್ತು ಬಳಗದವರಿಂದ ಸಂಗೀತ ಸಂಭ್ರಮ ನಡೆಯಿತು.