ಕೂಡಿಗೆ, ಅ. ೨೧: ಹಾರಂಗಿ ಸಾಕಾನೆ ಶಿಬಿರದ ಆವರಣದಲ್ಲಿ ಕಾಂಕ್ರಿಟ್ ರಸ್ತೆ ನಿರ್ಮಾಣಕ್ಕೆ ರೂ. ೧೮ ಲಕ್ಷ ವೆಚ್ಚದ ಕಾಮಗಾರಿಗೆ ಇಲಾಖೆಯ ವತಿಯಿಂದ ಟೆಂಡರ್ ಪ್ರಕ್ರಿಯೆಗಳು ನಡೆದಿವೆ ಎಂದು ಕುಶಾಲನಗರ ವಲಯ ಅರಣ್ಯಾಧಿಕಾರಿ ರತನ್ ಕುಮಾರ್ ತಿಳಿಸಿದ್ದಾರೆ. ಹಾರಂಗಿಯ ಸಾಕಾನೆ ಶಿಬಿರದ ಮುಖ್ಯ ದ್ವಾರದಿಂದ ಸಾಕಾನೆಗಳು ಇರುವ ಸ್ಥಳಕ್ಕೆ ತೆರಳಲು ರಸ್ತೆಯ ಸಮಸ್ಯೆ ಇದ್ದ ಕಾರಣದಿಂದಾಗಿ ಪ್ರವಾಸಿಗರಿಗೆ ತೊಂದರೆ ಆಗುತಿತ್ತು. ಕೇಂದ್ರಕ್ಕೆ ಆಗಮಿಸಿದ ಪ್ರವಾಸಿಗರ ಬೇಡಿಕೆಗೆ ಅನುಗುಣವಾಗಿ ರಸ್ತೆ ಮತ್ತು ಕೇಂದ್ರದ ಆವರಣದಲ್ಲಿ ಶೌಚಾಲಯ ನಿರ್ಮಾಣಕ್ಕೆ ಈಗಾಗಲೇ ಬಿಡುಗಡೆ ಗೊಂಡಿರುವ ರೂ. ೧೮ ಲಕ್ಷ ಬಳಕೆ ಮಾಡಿಕೊಂಡು ನಿರ್ಮಿಸಲಾಗುವುದು ಎಂದು ಕುಶಾಲನಗರ ವಲಯ ಅರಣ್ಯಾಧಿಕಾರಿ ರತನ್ ಕುಮಾರ್ ತಿಳಿಸಿದ್ದಾರೆ.