ಮೂರ್ನಾಡು, ನ. ೨೭: ಗಾಂಧಿನಗರ ಅಂಗನವಾಡಿ ಕೇಂದ್ರದಲ್ಲಿ ಬಾಲಮೇಳ, ಛದ್ಮವೇಷ, ಸೀಮಂತ ಕಾರ್ಯಕ್ರಮ ಮತ್ತು ಸಮವಸ್ತç ವಿತರಣಾ ಕಾರ್ಯಕ್ರಮ ನೆರವೇರಿತು.
ಪ್ರಬಾರ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ಮೇಪಾಡಂಡ ಸವಿತಾ ಕೀರ್ತನ್ ಅವರು ಮಾತನಾಡಿ, ಅಂಗನವಾಡಿ ಕಾರ್ಯಕರ್ತೆ ಚೈತ್ರ, ಸಹಾಯಕಿ ಜ್ಯೋತಿರವರು ಸಮುದಾಯದ ಸಹಕಾರ ಪಡೆದು ಹೊಸದಾಗಿ ಈ ದಿನ ಸಮವಸ್ತç ವಿತರಣೆಗೆ ಕ್ರಮ ಕೈಗೊಂಡಿರುವುದು ಶ್ಲಾಘನೀಯ. ಮಕ್ಕಳಲ್ಲಿ ಸಮಾನತೆ ಮೂಡಿಸಲು ಇದು ಸಹಕಾರವಾಗುತ್ತದೆ ಎಂದು ತಿಳಿಸಿದರು.
ಗ್ರಾಮ ಪಂಚಾಯಿತಿ ಮತ್ತು ಸಮುದಾಯದ ಸಹಕಾರ ಪಡೆದು ಅಂಗನವಾಡಿ ಕೇಂದ್ರವನ್ನು ಮಾದರಿ ಅಂಗನವಾಡಿ ಕೇಂದ್ರವನ್ನಾಗಿ ಮಾಡಲು ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರಿಗೆ ಸಲಹೆ, ಮಾರ್ಗದರ್ಶನ ನೀಡಿದರು.
ಗ್ರಾಮ ಪಂಚಾಯಿತಿ ಅಧ್ಯಕ್ಷರು ಮತ್ತು ಸದಸ್ಯರಲ್ಲಿ ಅಂಗನವಾಡಿ ಕೇಂದ್ರಕ್ಕಾಗಿ ಹಲವಾರು ಬೇಡಿಕೆಗಳನ್ನು ಸಲ್ಲಿಸಲಾಯಿತು. ಛದ್ಮವೇಷದಲ್ಲಿ ಪಾಲ್ಗೊಂಡ ಎಲ್ಲಾ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.
ಪೋಷಣ್ ಅಭಿಯಾನ ಯೋಜನೆ ಯಡಿ ಮೂರು ಗರ್ಭಿಣಿಯರಿಗೆ ಸೀಮಂತ ಕಾರ್ಯಕ್ರಮವನ್ನು ಮಾಡಲಾ ಯಿತು. ಮಕ್ಕಳಿಂದ ಹಲವಾರು ಸಾಂಸ್ಕೃತಿಕ ಕಾರ್ಯಕ್ರಮವು ನೆರವೇರಿತು.
ಕಾರ್ಯಕ್ರಮದಲ್ಲಿ ಮೂರ್ನಾಡು ಗ್ರಾಮ ಪಂಚಾಯಿತಿ ಅಧ್ಯಕ್ಷ ಕುಶನ್ ರೈ ಅವರು ಸಿಹಿ ಹಂಚಿದರು. ಸದಸ್ಯರಾದ ಯಶ್ವಿನ್, ಪಶು ವೈದ್ಯಾಧಿಕಾರಿ ಶಿಲ್ಪ, ಮೂರ್ನಾಡು ವೃತ್ತದ ಅಂಗನವಾಡಿ ಕಾರ್ಯಕರ್ತೆಯರು, ಪೋಷಕರು ಪಾಲ್ಗೊಂಡಿದ್ದರು.