ನಾಪೋಕ್ಲು, ಜ. ೧೦: ಪಟ್ಟಣದಲ್ಲಿ ವಾಹನದಟ್ಟಣೆ ನಿಯಂತ್ರಿಸಲು ಕಠಿಣ ಕಾನೂನಿನ ಕ್ರಮ ಕೈಗೊಳ್ಳಲಾಗುವುದು ಎಂದು ಠಾಣಾಧಿಕಾರಿ ಮಂಜುನಾಥ್ ಹೇಳಿದರು.
ನಾಪೋಕ್ಲು ಪಟ್ಟಣದ ಖಾಸಗಿ ರೆಸಾರ್ಟ್ನಲ್ಲಿ ಬುಧವಾರ ಕರೆಯಲಾಗಿದ್ದ ವಾಹನ ಚಾಲಕರ ಮತ್ತು ಅಂಗಡಿ ಮಾಲೀಕರ ಸಭೆಯಲ್ಲಿ ಅವರು ಮಾತನಾಡಿದರು. ವಾಹನ ಚಾಲಕರು ಅಗತ್ಯ ದಾಖಲೆಗಳನ್ನು ಹೊಂದಿಲ್ಲದಿದ್ದಲ್ಲಿ ಕಾನೂನು ಕ್ರಮಕ್ಕೆ ಬದ್ಧರಾಗಿ ಎಂದು ಅವರು ಎಚ್ಚರಿಕೆ ನೀಡಿದರು. ಆಟೋ ಚಾಲಕರು ಸಮವಸ್ತçವನ್ನು, ಚಾಲನ ಪರವಾನಗಿ ,ವಿಮೆ ಅಗತ್ಯವಿರುವ ಎಲ್ಲ ದಾಖಲೆಗಳನ್ನು ಹೊಂದಿರಬೇಕು ಎಂದರು. ಪಟ್ಟಣದಲ್ಲಿ ರಸ್ತೆ ಕಿರಿದಾಗಿದ್ದು ಆಟೋ ನಿಲ್ದಾಣಕ್ಕೆ ಪಂಚಾಯಿತಿ ಹಾಗೂ ಪೊಲೀಸ್ ಇಲಾಖೆ ವತಿಯಿಂದ ಶೀಘ್ರದಲ್ಲಿ ಸ್ಥಳಾವಕಾಶ ಕಲ್ಪಿಸಲಾಗುವುದು ಎಂದರು.
ಪೊಲೀಸ್ ಇಲಾಖೆ ವತಿಯಿಂದ ನೂತನವಾಗಿ ಎನ್ಪಿಕೆ ನಂಬರ್ ಪ್ಲೇಟ್ ಅಳವಡಿಸಲಾಗುವುದು ಎಂದ ಅವರು ಎಲ್ಲೆಂದರಲ್ಲಿ ಆಟೋ ನಿಲುಗಡೆ , ಮದ್ಯಪಾನ ಮಾಡಿ ಆಟೋ ಚಾಲನೆ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು. ಸಂತೆ ದಿನವಾದ ಸೋಮವಾರ ವಾಹನಗಳ ದಟ್ಟಣೆ ಇರುವುದರಿಂದಾಗಿ ವ್ಯಾಪಾರಸ್ಥರು ಮುಖ್ಯ ರಸ್ತೆ ಬದಿ ವಸ್ತುಗಳನ್ನು ಮಾರಾಟ ಮಾಡುವುದರಿಂದ ವಾಹನ ಸಂಚಾರಕ್ಕೆ ತೊಡಕಾಗುತ್ತಿರುವುದರಿಂದಾಗಿ ರಸ್ತೆ ಬದಿಯ ವ್ಯಾಪಾರವನ್ನು ನಿರ್ಬಂಧಿಸಲಾಗುವುದು.
ಬಸ್ಗಳು ಬಸ್ ನಿಲ್ದಾಣದಲ್ಲಿ ಕೇವಲ ಐದು ನಿಮಿಷ ಮಾತ್ರ ನಿಲುಗಡೆಗೊಳಿಸಬೇಕು. ಅಂಗಡಿ ಮಾಲೀಕರು ತಮ್ಮ ವಾಹನವನ್ನು ಅಂಗಡಿ ಎದುರು ನಿಲ್ಲಿಸದೆ ಪೊಲೀಸ್ ಮೈದಾನದಲ್ಲಿ ನಿಲ್ಲಿಸಬೇಕು, ಸಂಜೆ ೭ ರಿಂದ ಬೆಳಿಗ್ಗೆ ಎಂಟು ಗಂಟೆಯ ಒಳಗೆ ಲಾರಿಗಳಿಂದ ಸರಕುಗಳನ್ನು ಅಂಗಡಿ ಮಾಲೀಕರು ಇಳಿಸ ಬೇಕು, ಕಾರ್ಮಿಕರಿಂದ ಹಾಗೂ ಇತರರಿಂದ ಕದ್ದು ತಂದ ಕಾಫಿ, ಕರಿ ಮೆಣಸು ಇತರ ವಸ್ತುಗಳನ್ನು ಅಂಗಡಿ ಮಾಲೀಕರು ಖರೀದಿಸಬಾರದು ಎಂದು ಠಾಣಾಧಿಕಾರಿ ಮಂಜುನಾಥ್ ಸ್ಪಷ್ಟಪಡಿಸಿದರು.
ಈ ಸಂದರ್ಭ ಸಭೆಯಲ್ಲಿ ಇನ್ನಿತರ ವಿಷಯಗಳ ಬಗ್ಗೆ ಚರ್ಚಿಸಿ ಸಲಹೆ ಸೂಚನೆಗಳನ್ನು ಪಡೆದುಕೊಳ್ಳಲಾಯಿತು. . ಸಭೆಯಲ್ಲಿ, ನಾಪೋಕ್ಲು ಕೊಡವಸಮಾಜದ ಅಧ್ಯಕ್ಷ ಮುಂಡAಡ ಸಿ ನಾಣಯ್ಯ, ಗ್ರಾಮ ಪಂಚಾಯಿತಿ ಸದಸ್ಯ ಮಾಚೆಟ್ಟಿರ ಕುಸು ಕುಶಾಲಪ್ಪ, ವರ್ತಕ ಎಂ ಎ ಮನ್ಸೂರ್ ಅಲಿ, ಆಟೋ ಚಾಲಕರ ಮತ್ತು ಮಾಲೀಕರ ಸಂಘದ ಅಧ್ಯಕ್ಷ ಸುಕುಮಾರ್ ,ಅಂಗಡಿ ಮಾಲೀಕರು ಹಾಗೂ ಚಾಲಕರು ಉಪಸ್ಥಿತರಿದ್ದರು.