ಸುಂಟಿಕೊಪ್ಪ, ಫೆ. ೨: ಚುನಾವಣೆಗಳ ಸಂದರ್ಭದಲ್ಲಿ ಮಾತ್ರ ರಾಜಕೀಯವಾಗಿ ನಾವು ಪರಸ್ಪರ ಎದುರಾಳಿಗಳೇ ಹೊರತು ಅಭಿವೃದ್ಧಿ ವಿಷಯ ಬಂದಾಗ ನಾವೆಲ್ಲರೂ ಒಂದಾಗಿ ಸಾಗ ಬೇಕೆಂದು ಮಡಿಕೇರಿ ಕ್ಷೇತ್ರದ ಶಾಸಕ ಮಂತರ್‌ಗೌಡ ಕರೆ ನೀಡಿದ್ದಾರೆ.

ಲೋಟಸ್ ಬಡಾವಣೆಯಲ್ಲಿ ನೂತನವಾಗಿ ನಿರ್ಮಾಣವಾ ಗುತ್ತಿರುವ ಮಾರುಕಟ್ಟೆ ಸೇರಿದಂತೆ ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಒಟ್ಟು ರೂ. ೪೦ ಲಕ್ಷ ಮೊತ್ತದ ವಿವಿಧ ಕಾಮಗಾರಿಗಳಿಗೆ ಮಾತನಾಡಿದರು.

ಇತ್ತೀಚೆಗೆ ಮುಖ್ಯಮಂತ್ರಿಗಳು ರಾಜ್ಯದ ಎಲ್ಲಾ ಶಾಸಕರುಗಳು ತಲಾ ರೂ. ೧೦ ಕೋಟಿ ಅನುದಾನದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಈ ಮೊದಲೇ ಮಂಜೂರಾಗಿರುವ ಆರೋಗ್ಯ ಇಲಾಖೆಯ ನಿಗದಿತ ಅನುದಾನ ಬರ ಪರಿಹಾರ ಮಳೆ ಪರಿಹಾರ ತಾಲೂಕು ಪಂಚಾಯಿತಿ ಅನುದಾನದ ಅಡಿಯಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಗಳಿಗೆ ಶುಂಕುಸ್ಥಾಪನೆ ನೇರವೇರಿಸಲಾಗಿದೆ. ಗ್ರಾಮ ಪಂಚಾಯಿತಿ ಸದಸ್ಯರು ಸ್ಥಳೀಯ ಮುಖಂಡರು ಮತ್ತು ಸಾರ್ವಜನಿಕರು ಗುಣಮಟ್ಟದ ಕಾಮಗಾರಿಯನ್ನು ಪರಿಶೀಲಿಸಬೇಕೆಂದು ಅವರು ಕಿವಿಮಾತು ಹೇಳಿದರು.

ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ೭ ವಾರ್ಡ್ಗಳಿದ್ದು, ಸಾಕಷ್ಟು ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿದ್ದೂ ಇನ್ನೂ ಅಭಿವೃದ್ಧಿ ಕಾಣಬೇಕಾಗಿದೆ. ಆನೇಕ ರಸ್ತೆಗಳು ಬಸ್ ನಿಲ್ದಾಣ, ಪ್ರವಾಸಿ ಮಂದಿರ ಹಾಗೂ ಸುಸ್ಸಜಿತ ಮಾರುಕಟ್ಟೆ ಸೇರಿದಂತೆ ಹಲವಷ್ಟು ಅಭಿವೃದ್ಧಿ ಕಾಮಗಾರಿಗಳು ಆಗಬೇಕಾಗಿದೆ. ಇದರಲ್ಲಾವನ್ನು ಮುಂದಿನ ದಿನಗಳಲ್ಲಿ ಹಂvಹAತÀವಾಗಿ ಪೂರ್ಣಗೊಳಿಸಲಾಗುವುದೆಂದು ಭರವಸೆಯ ಮಾತುಗಳಾನ್ನಾಡಿದರು.

ಈ ಸಂದರ್ಭ ಗ್ರಾಮ ಪಂಚಾಯಿತಿ ಅಧ್ಯಕ್ಷ ಪಿ.ಆರ್. ಸುನಿಲ್‌ಕುಮಾರ್, ಉಪಾಧ್ಯಕ್ಷೆ ಶಿವಮ್ಮ, ಪಿಡಿಓ ವಿ.ಜಿ. ಲೋಕೇಶ್, ಗ್ಯಾರಂಟಿ ಅನುಷ್ಠಾನ ಸಮಿತಿ ಹಾಗೂ ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ. ಶಶಿಧರ್, ಜಿ.ಪಂ. ಮಾಜಿ ಸದಸ್ಯ ಪಿ.ಎಂ. ಲತೀಫ್, ನಗರಾಧ್ಯಕ್ಷ ರಫೀಕ್ ಖಾನ್, ಹೋಬಳಿ ಅಧ್ಯಕ್ಷ ರಜಾಕ್, ಅಲ್ಪಸಂಖ್ಯಾತರ ಅಧ್ಯಕ್ಷ ಅಬ್ದುಲ್ ಅಜೀಜ್, ಪಂಚಾಯಿತಿ ಸದಸ್ಯರುಗಳಾದ ನಾಗರತ್ನ, ಪಿ.ಎಫ್. ಸಬಾಸ್ಟಿನ್, ಸೋಮನಾಥ್, ಆಲಿಕುಟ್ಟಿ, ಪ್ರಸಾದ್‌ಕುಟ್ಟಪ್ಪ, ಶಬೀರ್, ವಾಹನ ಚಾಲಕರ ಸಂಘದ ಅಧ್ಯಕ್ಷ ಕಿಟ್ಟಣ್ಣ ರೈ ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.