ಕುಶಾಲನಗರ, ಫೆ. ೧೧: ಕರ್ನಾಟಕ ಸುವರ್ಣ ಸಂಭ್ರಮಾಚರಣೆ ಅಂಗವಾಗಿ ಕನ್ನಡ ಸಿರಿ ಸ್ನೇಹ ಬಳಗ ಆಶ್ರಯದಲ್ಲಿ ತಾ. ೨೫ ರಂದು ಕುಶಾಲನಗರದಲ್ಲಿ ನಡೆಯಲಿರುವ ಕುಶಲೋತ್ಸವ ಕಾರ್ಯಕ್ರಮ ಪೂರ್ವ ಸಿದ್ಧತೆ ಸಭೆ ನಡೆಯಿತು.
ಕುಶಾಲನಗರದ ನಡೆಗೆ ನುಡಿಯಾದ ಮಾಜಿ ಮುಖ್ಯಮಂತ್ರಿ ಆರ್. ಗುಂಡೂರಾವ್ ಅವರಿಗೆ ನುಡಿ ನಮನ ಕಾರ್ಯಕ್ರಮ ಹಾಗೂ ರೈತರ ಜೀವನಾಡಿ ಹಾರಂಗಿ ಜಲಾಶಯದ ನಿರ್ಮಾತೃ ಮಾಜಿ ಮುಖ್ಯಮಂತ್ರಿ ವೀರೇಂದ್ರ ಪಾಟೀಲ್ ಅವರ ಜನ್ಮ ಶತಮಾನೋತ್ಸವ ಅಂಗವಾಗಿ ನಡೆಯಲಿರುವ ವಿಶೇಷ ಕಾರ್ಯಕ್ರಮ ಕುಶಾಲನಗರ ರೈತ ಸಹಕಾರ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದು, ಈ ಸಂಬAಧ ವಿವಿಧ ಸಂಘ-ಸAಸ್ಥೆಗಳ ಪ್ರಮುಖರ ಸಲಹೆ ಸೂಚನೆಗಳ ಬಗ್ಗೆ ಚರ್ಚೆ ನಡೆಯಿತು.
ಕುಶಾಲನಗರ ಪುರಸಭೆ ಅಧ್ಯಕ್ಷೆ ಜಯಲಕ್ಷ್ಮಿ ಚಂದ್ರು ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕನ್ನಡ ಸಿರಿ ಸ್ನೇಹ ಬಳಗದ ಅಧ್ಯಕ್ಷ ಬಿ.ಎಸ್. ಲೋಕೇಶ್ ಸಾಗರ್ ಕಾರ್ಯಕ್ರಮದ ಮಾಹಿತಿ ನೀಡಿದರು.
ತಾ. ೨೫ ರಂದು ಬೆಳಿಗ್ಗೆ ಕುಶಾಲನಗರ ಕೊಪ್ಪ ಗಡಿಭಾಗದ ಕಾವೇರಿ ಪ್ರತಿಮೆಗೆ ಪೂಜೆ ಸಲ್ಲಿಸಿ ಭವ್ಯ ಮಂಟಪ ಮೆರವಣಿಗೆ ಹೊರಟು ನಂತರ ಕುಶಾಲನಗರದ ಮುಖ್ಯ ರಸ್ತೆಯಲ್ಲಿ ಸಾಗಿ ರೈತ ಸಹಕಾರ ಭವನದಲ್ಲಿ ಕಾರ್ಯಕ್ರಮ ನಡೆಸಲಾಗುವುದು. ಕರ್ನಾಟಕ ಸುವರ್ಣ ಸಂಭ್ರಮಾಚರಣೆ ಅಂಗವಾಗಿ ಈಗಾಗಲೇ ಒಂದು ವರ್ಷಗಳ ಅವಧಿಯಲ್ಲಿ ೫೦ ವಿವಿಧ ಕಾರ್ಯಕ್ರಮಗಳನ್ನು ನಡೆಸಲಾಗಿದೆ.
ಮೆರವಣಿಗೆ ಉದ್ಘಾಟನೆಯನ್ನು ಕ್ಷೇತ್ರ ಶಾಸಕ ಡಾ. ಮಂತರ್ ಗೌಡ ಅವರು ನೆರವೇರಿಸಲಿದ್ದು, ಕಾರ್ಯಕ್ರಮದಲ್ಲಿ ಉಸ್ತುವಾರಿ ಸಚಿವರು ಸೇರಿದಂತೆ ಹಾರಂಗಿ ಯೋಜನಾ ವೃತ್ತದ ವ್ಯಾಪ್ತಿಯ ಕ್ಷೇತ್ರಗಳ ಪ್ರತಿನಿಧಿಗಳು, ರಾಜ್ಯ ಸಚಿವರುಗಳು ಪಾಲ್ಗೊಳ್ಳಲಿದ್ದಾರೆ.
ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ರೈತಾಪಿ ವರ್ಗ ಮತ್ತು ಸಾರ್ವಜನಿಕರು ಪಾಲ್ಗೊಳಲ್ಲಿದ್ದಾರೆ ಎಂದು ಅವರು ಮಾಹಿತಿ ನೀಡಿದರು. ವೇದಿಕೆಯಲ್ಲಿ ಉಪಸ್ಥಿತರಿದ್ದ ಹಿರಿಯರಾದ ವಿ.ಎನ್. ವಸಂತಕುಮಾರ್, ಎಂ.ಹೆಚ್. ನಝೀರ್ ಅಹ್ಮದ್ ಎಂ.ಎನ್. ಕುಮಾರಪ್ಪ ಅವರುಗಳು ಮಾತನಾಡಿದರು.
ಪಟ್ಟಣದ ವಿವಿಧ ಸಂಘ-ಸAಸ್ಥೆಗಳ ಪ್ರಮುಖರು ಸಲಹೆ-ಸೂಚನೆ ನೀಡುವುದರ ಜೊತೆಗೆ ಕಾರ್ಯಕ್ರಮದ ಯಶಸ್ವಿಗೆ ಕೈಜೋಡಿಸುವುದಾಗಿ ಭರವಸೆ ವ್ಯಕ್ತಪಡಿಸಿದರು.