ವೀರಾಜಪೇಟೆ, ಫೆ. ೧೨: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ವೀರಾಜಪೇಟೆ, ಸ್ವಸಹಾಯ ಸಂಘಗಳ ಒಕ್ಕೂಟಗಳು ಇವರ ಆಶ್ರಯದಲ್ಲಿ ಗ್ರಾಮಸ್ಥರಿಗೆ ಪರಿಸರ ಮಾಹಿತಿ ಕಾರ್ಯಕ್ರಮ ಮೂರ್ನಾಡು ವಲಯದ ಮರಗೋಡು ಕಾರ್ಯಕ್ಷೇತ್ರದಲ್ಲಿ ನಡೆಯಿತು.
ಸಂಪನ್ಮೂಲ ವ್ಯಕ್ತಿಯಾಗಿ ಕಡಗದಾಳು ಗ್ರಾಮದ ಪ್ರಗತಿಪರ ಕೃಷಿಕರಾದ ಮಂಜುಳ ಅವರು ಆಗಮಿಸಿ ಸದಸ್ಯರಿಗೆ ಪರಿಸರ ಸಂರಕ್ಷಣೆ, ಮಣ್ಣಿನ ಸವಕಳಿ ಮತ್ತು ಏಲಕ್ಕಿ ಕೃಷಿಯ ಬಗ್ಗೆ ಮಾಹಿತಿ ನೀಡಿದರು. ನಂತರ ಮಾತನಾಡಿದ ಕೃಷಿ ಮೇಲ್ವಿಚಾರಕರು ಆಧುನಿಕ ತಂತ್ರಜ್ಞಾನದ ಮೂಲಕ ಕೃಷಿಯಲ್ಲಿ ಆಗುವ ಪರಿಣಾಮ ಹಾಗೂ ಕಡಿಮೆ ಅವಧಿಯಲ್ಲಿ ಹೆಚ್ಚು ಲಾಭದಾಯಕ ಕೃಷಿ ಪದ್ಧತಿಯ ಬಗ್ಗೆ ಮಾಹಿತಿ ನೀಡಿದರು. ನಂತರ ಗ್ರಾಮಸ್ಥರಿಂದ ಗಿಡ ನಾಟಿ ಮಾಡಲಾಯಿತು.
ಈ ಸಂದರ್ಭ ವಲಯ ಮೇಲ್ವಿಚಾರಕ ಪ್ರತಾಪ್, ಸೇವಾ ಪ್ರತಿನಿಧಿ ಲತಾ, ಒಕ್ಕೂಟದ ಪದಾಧಿಕಾರಿಗಳು ಹಾಗೂ ಸಂಘದ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.