ಗೋಣಿಕೊಪ್ಪಲು, ಮಾ. ೨೧: ಸಮಾಜಮುಖಿ ಕಾರ್ಯದಲ್ಲಿ ಸಂಘ-ಸAಸ್ಥೆಗಳು ಸಕ್ರಿಯವಾಗಿ ಪಾಲ್ಗೊಳ್ಳಬೇಕು. ಆ ಮೂಲಕ ಅನೇಕ ಜನಪರ ಕಾರ್ಯಗಳನ್ನು ಕೈಗೊಳ್ಳಬೇಕು. ಇದರಿಂದ ನಾಗರಿಕರಿಗೆ ವಿವಿಧ ರೀತಿಯ ಪ್ರಯೋಜನ ಪಡೆಯಲು ಅನುಕೂಲವಾಗಲಿದೆ. ಈ ನಿಟ್ಟಿನಲ್ಲಿ ಗೋಣಿಕೊಪ್ಪ ಕಾವೇರಿ ಪೊಮ್ಮಕ್ಕಡ ಕೂಟವು ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಿದ್ದು ಉತ್ತಮ ಕಾರ್ಯ ಎಂದು ಪೊನ್ನಂಪೇಟೆ ತಾಲೂಕು ತಹಶೀಲ್ದಾರ್ ಮೋಹನ್ ಕುಮಾರ್ ಮೆಚ್ಚುಗೆ ವ್ಯಕ್ತಪಡಿಸಿದರು.
ಗೋಣಿಕೊಪ್ಪಲುವಿನ ಕೃಷಿ ಉತ್ಪನ್ನ ಮಾರುಕಟ್ಟೆ ಸಭಾಂಗಣದಲ್ಲಿ ಕಾವೇರಿ ಪೊಮ್ಮಕ್ಕಡ ಕೂಟದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಹಿಳೆಯರು ಮನಸು ಮಾಡಿದಲ್ಲಿ ಎಲ್ಲಾ ಕಾರ್ಯದಲ್ಲಿ ಯಶಸ್ಸನ್ನು ಸಾಧಿಸಬಹುದು. ಆ ನಿಟ್ಟಿನಲ್ಲಿ ಪ್ರಯತ್ನಗಳು ನಿರಂತರವಾಗಿ ಮುಂದುವರೆಯಬೇಕು. ಆರೋಗ್ಯ ಶಿಬಿರದಲ್ಲಿ ಪಾಲ್ಗೊಳ್ಳುವುದರಿಂದ ಅನುಭವಿ ವೈದ್ಯರ ಉಚಿತ ಸಲಹೆಯನ್ನು ಪಡೆಯಬಹುದಾಗಿದೆ. ಪ್ರತಿ ನಾಗರಿಕನು ತಮ್ಮ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು. ವೈದ್ಯರುಗಳ ಸಲಹೆಗಳನ್ನು ಆಗಿಂದ್ದಾಗಿಯೆ ಪಡೆಯಬೇಕು ಎಂದರು. ಕಾವೇರಿ ಪೊಮ್ಮಕ್ಕಡ ಕೂಟದ ಅಧ್ಯಕ್ಷೆ ಕೊಟ್ಟಂಗಡ ವಿಜು ದೇವಯ್ಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಪೊಮ್ಮಕ್ಕಡ ಕೂಟವು ಹತ್ತಾರು ಸಮಾಜಮುಖಿ ಕಾರ್ಯದಲ್ಲಿ ತಮ್ಮನ್ನು ಸಕ್ರೀಯವಾಗಿ ತೊಡಗಿಸಿಕೊಳ್ಳುತ್ತಿದೆ. ಈ ಬಾರಿ ನುರಿತ ತಜ್ಞ ವೈದ್ಯರ ತಂಡದಿAದ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿದೆ. ಸುತ್ತಮುತ್ತಲಿನ ನಾಗರಿಕರು, ಸೇರಿದಂತೆ ಗೋಣಿಕೊಪ್ಪ ಗ್ರಾಮ ಪಂಚಾಯಿತಿಯ ಪೌರ ಕಾರ್ಮಿಕರು ಶಿಬಿರದಲ್ಲಿ ಪಾಲ್ಗೊಳ್ಳುವ ಮೂಲಕ ಈ ಯೋಜನೆಯ ಫಲ ಪಡೆದಿದ್ದಾರೆ. ಅಮ್ಮತ್ತಿಯ ಆರ್.ಐ.ಹೆಚ್.ಪಿ. ಆಸ್ಪತ್ರೆಯ ನುರಿತ ತಜ್ಞರ ತಂಡ ತಮ್ಮ ಅಮೂಲ್ಯ ಸಮಯವನ್ನು ಇಂತಹ ಸಮಾಜ ಮುಖಿ ಕಾರ್ಯಕ್ಕೆ ನೀಡಿರುವುದು ಶ್ಲಾಘನೀಯ. ಪೊಮ್ಮಕ್ಕಡ ಕೂಟವೂ ಸಾರ್ವಜನಿಕವಾಗಿ ಹಲವು ಕಾರ್ಯಕ್ರಮಗಳನ್ನು ಸಮಾಜಮುಖಿ ಯಾಗಿ ನೀಡುತ್ತಿರುವುದರಿಂದ ತಾಲೂಕು ಆಡಳಿತವು ಸಂಘದ ಕಟ್ಟಡಕ್ಕೆ ಉಚಿತ ನಿವೇಶನ ವನ್ನು ಮಂಜೂರು ಮಾಡಿಕೊಡುವಂತೆ ತಹಶೀಲ್ದಾರರಲ್ಲಿ ಮನವಿ ಮಾಡಿದರು. ಕಾರ್ಯಕ್ರಮದಲ್ಲಿ ಕಾವೇರಿ ಪೊಮ್ಮಕ್ಕಡ ಕೂಟದ ಕಾರ್ಯದರ್ಶಿ ಮುಕ್ಕಾಟಿರ ಬೀನಾ ಪ್ರಸನ್ನ, ಅಮ್ಮತ್ತಿಯ ಆರ್.ಐ.ಹೆಚ್.ಪಿ. ಆಸ್ಪತ್ರೆಯ ನುರಿತ ತಜ್ಞ ವೈದ್ಯರುಗಳಾದ ಡಾ. ಸಿ.ಕೆ.ಎನ್. ಚಂದ್ರು, ಡಾ. ನಿಶ್ಚಲ, ಡಾ. ಕೃಷ್ಣಪ್ರಸಾದ್, ಸೇರಿದಂತೆ ಇನ್ನಿತರ ಗಣ್ಯರು ಪಾಲ್ಗೊಂಡಿದ್ದರು. ಕಾವೇರಿ ಪೊಮ್ಮಕ್ಕಡ ಕೂಟದ ನಿರ್ದೇಶಕರಾದ ಅಣ್ಣಾಳಮಾಡ ಮಾನಸ ತಿಮ್ಮಯ್ಯ ಸ್ವಾಗತಿಸಿ, ನಿರೂಪಿಸಿ, ವಂದಿಸಿದರು. ಕೂಟದ ಪದಾಧಿಕಾರಿಗಳು ಸೇರಿದಂತೆ ಸದಸ್ಯರುಗಳು ಪಾಲ್ಗೊಂಡಿದ್ದರು.