ವರದಿ : ವಾಸು
ಸಿದ್ದಾಪುರ, ಮಾ. ೩೦: ಅಮ್ಮತ್ತಿಯಲ್ಲಿ ಕೊಡವ ಸಂಸ್ಕೃತಿ - ಆಚಾರ ವಿಚಾರಗಳು, ಪದ್ಧತಿ-ಪರಂಪರೆಗಳನ್ನು ಒಳಗೊಂಡAತೆ ಜರುಗಿದ ಸಾಂಸ್ಕೃತಿಕ ಉತ್ಸವ ಸಂಭ್ರಮದೊAದಿಗೆ ಜಾಗೃತಿಗೂ ಕಾರಣವಾಯಿತು. ಕೊಡವ ಸಾಹಿತ್ಯ ಅಕಾಡೆಮಿ, ಅಮ್ಮತ್ತಿ ಕೊಡವ ಸಮಾಜದ ಸಹಯೋಗದೊಂದಿಗೆ ಕೊಡವ ಬಲ್ಯ ನಮ್ಮೆ ಎರಡು ದಿನಗಳ ಕಾರ್ಯಕ್ರಮವನ್ನು ಅಮ್ಮತ್ತಿಯಲ್ಲಿ ಆಯೋಜಿಸಿದ್ದು ಮೊದಲ ದಿನವಾದ ಇಂದು ಕೊಡವ ಪರಂಪರೆ ಅನಾವರಣಗೊಂಡಿತು. ಪಟ್ಟಣದಲ್ಲಿ ಏರ್ಪಡಿಸಿದ್ದ ಮೆರವಣಿಗೆ, ನಂತರ ಜನಪದ ಪ್ರದರ್ಶನ ಗಮನ ಸೆಳೆಯಿತು.ಕೊಂಬುಕೊಟ್ಟ್, ತಳಿಯತಕ್ಕಿ ಬೊಳಕ್, ದುಡಿಕೊಟ್ಟ್ ಪಾಟ್, ಅಜ್ಜಪ್ಪ-ತಾಯವ್ವ ತೆರೆ ಇತ್ಯಾದಿ ಮೆರವಣಿಗೆಯಲ್ಲಿ ಕಂಡುಬAತು.
ಹೊಸೂರು ರಸ್ತೆಯಿಂದ ಮಹಿಳೆಯರು, ಪುರುಷರು, ಮಕ್ಕಳು ಕೊಡವ ಸಾಂಪ್ರದಾಯಿಕ ವಸ್ತç ಧರಿಸಿ ಮೆರವಣಿಗೆಯಲ್ಲಿ ಸಾಗಿದರು. ಮೆರವಣಿಗೆಯನ್ನು ಹಿರಿಯ ಸಮಾಜಸೇವಕ ನೆಲ್ಲಮಕ್ಕಡ ಶಂಭು ಸೋಮಯ್ಯ ಹಾಗೂ ಅಮ್ಮತ್ತಿ ರೈತ ಸಂಘದ ಅಧ್ಯಕ್ಷ ಕಾವಾಡಿಚಂಡ ಯು. ಸೋಮಯ್ಯ ಉದ್ಘಾಟಿಸಿದರು. ಅಮ್ಮತ್ತಿಯ ಮುಖ್ಯ ವೃತ್ತದಲ್ಲಿ ಶಾಸಕರು ಸೇರಿದಂತೆ ಹಲವರು ಕೊಡವ ನೃತ್ಯ ಪ್ರದರ್ಶಿಸಿ ಗಮನ ಸೆಳೆದರು.
ಸರ್ಕಾರದಿಂದ ಅಗತ್ಯ ಸಹಕಾರ
ಕಾವೇರಿ ನಾಡಿನ ಪುಣ್ಯ ಭೂಮಿಯಲ್ಲಿ ಹುಟ್ಟಿ ಬೆಳೆದ ನಾವುಗಳು ಕೊಡವ ಭಾಷೆ, ಕಲೆ, ಸಾಹಿತ್ಯ, ಸಂಸ್ಕೃತಿಯನ್ನು ಎಲ್ಲೆಡೆ ಪಸರಿಸುವಂತಾಗಬೇಕು. ಈ ದಿಸೆಯಲ್ಲಿ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ಸಾಹಿತ್ಯ ಮತ್ತು ಸಂಸ್ಕೃತಿ ಚಟುವಟಿಕೆಗೆ ಸರ್ಕಾರದಿಂದ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಮತ್ತು ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ಹೇಳಿದರು.
ಕೊಡವ ಸಮಾಜದಲ್ಲಿ ನಡೆದ ‘ಕೊಡವ ಬಲ್ಯನಮ್ಮೆ’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಕೊಡವ ಭಾಷೆ, ನಾಡು ನುಡಿ ಬಗ್ಗೆ ವಿಶೇಷ ಪ್ರೀತಿ ಇರಬೇಕು. ಕೊಡವ ಭಾಷೆ ಕೊಡಗಿನ ಪರಿಸರ ಮತ್ತು ಪ್ರಕೃತಿಯನ್ನು ಸಂರಕ್ಷಿಸಬೇಕು. ಕೊಡವ ಭಾಷೆ, ಸಂಸ್ಕೃತಿ, ಕಲೆಗಳು ಉಳಿದಾಗ ಸಮಾಜ ಉಳಿಯಲು ಸಾಧ್ಯ. ಈ ನಿಟ್ಟಿನಲ್ಲಿ ಕೊಡವ ಭಾಷೆ ಸಂಸ್ಕೃತಿ ಕಲೆಗಳನ್ನು ಮತ್ತಷ್ಟು ಉತ್ತುಂಗಕ್ಕೆ ಕೊಂಡೊಯ್ಯಬೇಕು ಎಂದು ನುಡಿದರು.
ಕೋವಿ ಹಕ್ಕು ಕುರಿತು ಮಾತನಾಡಿದ ಶಾಸಕರು, ಕೊಡವ ಭಾಷಿಕರ ಸಂಪ್ರದಾಯ, ಪರಂಪರೆ, ಆಚಾರಗಳಿಗೆ ಯಾವುದೇ ರೀತಿಯ ಅಡ್ಡಿಯಿಲ್ಲ ಎಂದು ಇದೇ ಸಂದರ್ಭ ತಿಳಿಸಿದರು. ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಅಜ್ಜಿನಿಕಂಡ ಮಹೇಶ್ ನಾಚಯ್ಯ ಮಾತನಾಡಿ, ಕೊಡವ ಭಾಷಿಕರ ಪರಂಪರೆ ಹೆಗ್ಗುರುತುಗಳಾದ ಐನ್ಮನೆ, ಮುಂದ್ಮನೆ, ಕೈಮಡ, ಅಂಬಲ, ಮಂದ್-ಮಾನಿ, ಕೇಕೊಳ- ತೂಟ್ಂಗಳ, ಆರೋಡಗಳನ್ನು ಉಳಿಸಿಕೊಂಡು ಹೋಗಲು ಸರ್ಕಾರ ದಿಂದ ಸೌಲಭ್ಯ ಒದಗಿಸುವಂತಾಗ ಬೇಕು. ಜೊತೆಗೆ ಪ್ರತ್ಯೇಕ ಪರಿಹಾರ ನಿಧಿ ಸ್ಥಾಪಿಸುವಂತಾಗಬೇಕು.
೪ನಾಲ್ಕನೇ ಪುಟಕ್ಕೆ
(ಮೊದಲ ಪುಟದಿಂದ) ಪುತ್ತರಿ ಹುತ್ತರಿಯಾಗಿ, ಕೈಲ್ಪೊವ್ದ್ ಕೈಲು ಮೂಹೂರ್ತ ವಾಗಿ, ಪೆಗ್ಗಳ-ಹೆಗ್ಗಳವಾಗಿ, ಬಲಂಬೇರಿ-ಬಲಮುರಿಯಾಗಿ, ಪುದಿಕೇರಿ-ಹುದಿಕೇರಿಯಾಗಿ, ಬೊಳ್ಳರಿಮಾಡ್-ಬೆಳ್ಳರಿಮಾಡು ಆಗಿ, ಬುಟ್ಟಂಗಾಲ -ಬಿಟ್ಟಿಂಗಾಲವಾಗಿ, ಪಟ್ಟಿಪೊಳೆ-ಹಟ್ಟಿಹೊಳೆಯಾಗಿ, ಬೊಳ್ಳುಮಾಡ್-ಬೆಳ್ಳುಮಾಡು ಆಗಿ, ಬೊಳ್ಯಪ್ಪ-ಬೆಳ್ಯಪ್ಪ, ಬೆಂಜಕಾರ್ಡ್-ಬೆAದಕಾಡು ಆಗಿ ಬದಲಾಗಿದೆ. ಆದ್ದರಿಂದ ಈ ಸ್ಥಳದ ಮರು ನಾಮಕರಣ ಮಾಡುವಂತಾಗಬೇಕು ಎಂದು ಶಾಸಕರಲ್ಲಿ ಕೋರಿದರು.
ಕೊಡವ ಸಂಸ್ಕೃತಿಯ ಅವಿಭಾಜ್ಯ ಅಂಗ ಎನಿಸಿಕೊಂಡಿರುವ ಕೊಡವ ಆಭರಣಗಳಾದ ಪತ್ತಾಕ್, ಅಡ್ಡಿಗೆ, ಕೊಕ್ಕೆತಾತಿ, ಜೋಮಾಲೆ, ಎಣೆ ಕಡಗ ಮೊದಲಾದ ಸಾಂಪ್ರದಾಯಿಕ ಆಭರಣ ಹಾಗೆಯೇ ಉಡುಪುಗಳಾದ ಬೊಳ್ತ ಕುಪ್ಯ, ಕರ್ತ ಕುಪ್ಯ, ಚೇಲೆ, ಪೀಚೆ ಕತ್ತಿ, ಕೋರೆ ಕೆಟ್ಟ್, ಪಾನಿ ಕೆಟ್ಟ್, ಕೊಡವತಿ ಪೊಡಿಯ(ಸೀರೆ) ಕೊಡವರ ಪಾರಂಪರಿಕ ಉಡುಪುಗಳಾಗಿ ಘೋಷಿಸಬೇಕು ಎಂದರು. ಕೊಡವ ಭಾಷೆಯನ್ನು ಸಂವಿಧಾನದ ೮ನೇ ಪರಿಚ್ಛೇಧಕ್ಕೆ ಸೇರ್ಪಡೆಗೊಳಿಸಬೇಕು. ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುವ ಮೂಲಕ ಕೊಡವ ಭಾಷೆಗೆ ಸಾಂವಿಧಾನಿಕ ಭದ್ರತೆ ಒದಗಿಸಿಕೊಡಬೇಕೆಂದು ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷರು ಮನವಿ ಮಾಡಿದರು.
ಕೊಡವ ಸಂಸ್ಕೃತಿ, ಜಾನಪದ ಕಲೆ, ಇತಿಹಾಸ, ಪುರಾಣಗಳನ್ನು ಹೊಂದಿರುವ ಶ್ರೀಮಂತ ಸಂಸ್ಕೃತಿಯ ಭಾಷೆಯಾಗಿದ್ದು, ಕರ್ನಾಟಕ ರಾಜ್ಯದ ಆಡಳಿತದಲ್ಲಿ ೨ ನೇ ಭಾಷೆಯ ಸ್ಥಾನ ನೀಡಬೇಕು ಎಂದು ಕೋರಿದರು.
ಕೊಡವರಿಗೆ ‘ಕೂರ್ಗ್ ಬೈ ರೇಸ್’ ಹಾಗೂ ಜಮ್ಮಾ ಹಿಡುವಳಿದಾರರಿಗೆ ಕೋವಿ ಹೊಂದುವ ವಿಶೇಷ ಹಕನ್ನು ಭಾರತೀಯ ಶಸ್ತಾçಸ್ತç ಕಾಯ್ದೆ ೧೯೫೯ ರಲ್ಲಿ ನೀಡಿದೆ. ಅದನ್ನು ಮುಂದುವರೆಸಬೇಕು ಎಂದು ಮನವಿ ಮಾಡಿದರು.
ಅಮ್ಮತ್ತಿ ಕೊಡವ ಸಮಾಜದ ಅಧ್ಯಕ್ಷ ಐನಂಡ ಪ್ರಕಾಶ್ ಗಣಪತಿ, ಅಖಿಲ ಕೊಡವ ಸಮಾಜದ ಅಧ್ಯಕ್ಷ ಪರದಂಡ ಕೆ. ಸುಬ್ರಮಣಿ, ಕೊಡವ ಸಮಾಜದ ಒಕ್ಕೂಟಗಳ ಅಧ್ಯಕ್ಷ ಕಳ್ಳಿಚಂಡ ವಿಷ್ಣು ಕಾರ್ಯಪ್ಪ, ಕೊಡವ ಭಾಷಾ ಸಮುದಾಯಗಳ ಕೂಟದ ಅಧ್ಯಕ್ಷ ಡಾ. ಮೇಚಿರ ಸುಭಾಷ್ ನಾಣಯ್ಯ, ಸವಿತ ಸಮಾಜದ ಅಧ್ಯಕ್ಷ ತಾಪನೆರ ಎಂ. ಸಾಬು, ಬಣ್ಣ ಸಮಾಜದ ಅಧ್ಯಕ್ಷ ಬೀಕಚಂಡ ಬೆಳ್ಯಪ್ಪ, ಸೋಮವಾರಪೇಟೆ ಕೊಡವ ಸಮಾಜದ ಅಧ್ಯಕ್ಷ ಮಾಳೇಟಿರ ಅಭಿಮನ್ಯು ಕುಮಾರ್, ಅರಮನೆಪಾಲೆ ಸಮಾಜದ ಮುಖ್ಯಸ್ಥರಾದ ಅರಮನೆಪಾಲೆರ ದೇವಯ್ಯ ಅವರು ಮಾತನಾಡಿದರು.
‘ಪಟ್ಟೋಲೆ ಪಳಮೆ’ಯ ನಡಿಕೇರಿಯಂಡ ಚಿಣ್ಣಪ್ಪ ಅವರ ಜ್ಞಾಪಕಾರ್ಥವಾಗಿ ಮೇ. ಮುಂಡAಡ ಎಂ.ಮಾಚಯ್ಯ ಅವರು ಬರೆದಿರುವ ‘ಎಳ್ತ್ರ ಜೊಪ್ಪೆ’, ಕ್ಯಾ| ಬಿದ್ದಂಡ ನಾಣಿ ದೇವಯ್ಯ ಅವರು ಬರೆದಿರುವ ‘ಬೊಳ್ಳಿ ಕೊಂಬ್ರ ಕೂತ್’, ಸಣ್ಣುವಂಡ ಎಂ. ವಿಶ್ವನಾಥ್ (ಪ್ರಕಾಶ) ಅವರು ಬರೆದಿರುವ ‘ಕೂತ್ಂಗೊರೆ’, ಉಡುವೆರ ರಾಜೇಶ್ ಉತ್ತಪ್ಪ ಅವರು ಬರೆದಿರುವ ‘ಕೂಟ್ಕರಿ’, ಅಜ್ಜಿನಿಕಂಡ ಪ್ರಮೀಳ ನಾಚಯ್ಯ ಅವರು ಬರೆದಿರುವ ‘ಮರಕೊಟ್ಟ’, ಮುಂಡAಡ ಎ. ಪೂಣಚ್ಚ ಅವರು ಬರೆದಿರುವ ‘ಎಳ್ತ್ರ ಪತ್ತಾಯ’, (ಬಾಚಮಡ ದಿ. ಡಿ. ಗಣಪತಿ) ಅವರ ‘ಕೊಡವ: ಓರ್ ಚಿತ್ರಕಥೆ’, ಮುಕ್ಕಾಟಿರ ಸರೋಜ ಸುಬ್ಬಯ್ಯ ಅವರು ಬರೆದಿರುವ ‘ಸರೋಜ’, ಬೊಳ್ಳಚೆಟ್ಟಿರ ವಿಜಯ ಚೆಟ್ಟಿಚ ಅವರು ಬರೆದಿರುವ ‘ಚೆಂಬAದುಡಿ’ ಎಂಬ ಪುಸ್ತಕವನ್ನು ಐಆರ್ಎಸ್ ಅಧಿಕಾರಿ ದೇವಣಿರ ಪ್ರೀತ್ ಗಣಪತಿ ಬಿಡುಗಡೆ ಮಾಡಿದರು.
ಮೋರಿ ರಾಜಪ್ಪ ಅವರ ಜ್ಞಾಪಕಾರ್ಥವಾಗಿ ವಿವಿಧ ಸ್ಫರ್ಧಾ ಕಾರ್ಯಕ್ರಮ ನಡೆದವು. ಉಮ್ಮತ್ತಾಟ್-ಪೊನ್ನಾಜಿರ ಧರಣಿ, ಬೊಳಕಾಟ್-ಕುಕ್ಕೆರ ಜಯ ಚಿಣ್ಣಪ್ಪ, ಕೋಲಾಟ್-ಡಾ| ಅಜ್ಜಿನಿಕಂಡ ಸಿ. ಗಣಪತಿ, ಕತ್ತಿಯಾಟ್-ಮಲ್ಲಪನೆರ ವಿನು ಚಿಣ್ಣಪ್ಪ, ಉರ್ಟಿಕೊಟ್ಟ್ ಆಟ್-ಕುಡಿಯರ ಶಾರದ, ಕಪ್ಪೆಯಾಟ್-ಚೊಟ್ಟೆಯಂಡ ಸಮಿತ್ ಸೋಮಣ್ಣ, ಬಾಳೋಪಾಟ್-ಬೊಟ್ಟೋಳಂಡ ಕಾಶಿ ಅಚ್ಚಯ್ಯ, ಕೊಂಬು-ಕೊಟ್ಟ್- ಶ್ರೀನಿವಾಸ್, ವಾಲಗತಾಟ್- ಅಜ್ಜಿಕುಟ್ಟಿರ ಸಿ. ಗಿರೀಶ್, ಸಮ್ಮಂಧ ಕೊಡ್ಪ-ಚೇನಂಡ ರಘು ಉತ್ತಪ್ಪ, ಪರಿಯಕಳಿ-ಪಾಲೇಂಗಡ ಅಮಿತ್ ಭೀಮಯ್ಯ, ಮಂಡೆಕ್ ‘ತುಣಿ’ ಕೆಟ್ಟುವ-ಕ್ಯಾಲೇಟಿರ ಪವಿತ್ ಪೂವಯ್ಯ ಚಾಲನೆ ನೀಡಿದರು. ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷೆ ಅಮ್ಮಾಟಂಡ ಪಾರ್ವತಿ ಅಪ್ಪಯ್ಯ, ಬಿದ್ದಾಟಂಡ ಎಸ್. ತಮ್ಮಯ್ಯ, ಐಮುಡಿಯಂಡ ರಾಣಿ ಮಾಚಯ್ಯ, ಬಾಚರಣಿಯಂಡ ಪಿ. ಅಪ್ಪಣ್ಣ, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಸದಸ್ಯರಾದ ಪುತ್ತರಿರ ಪಪ್ಪು ತಿಮ್ಮಯ್ಯ, ಕಂಬೆಯAಡ ಡೀನ ಬೋಜಣ್ಣ, ಮೊಳ್ಳೆಕುಟ್ಟಂಡ ದಿನು ಬೋಜಪ್ಪ, ಕೊಂಡಿಜಮ್ಮನ ಎಂ. ಬಾಲಕೃಷ್ಣ, ಪಾನಿಕುಟ್ಟಿರ ಕೆ. ಕುಟ್ಟಪ್ಪ, ಪೊನ್ನಿರ ಯು. ಗಗನ್, ಕುಡಿಯರ ಎಂ. ಕಾವೇರಪ್ಪ, ನಾಯಂದಿರ ಆರ್. ಶಿವಾಜಿ, ಚೆಪ್ಪುಡಿರ ಎಸ್. ಉತ್ತಪ್ಪ, ನಾಯಕಂಡ ಬೇಬಿ ಚಿಣ್ಣಪ್ಪ, ಚೊಟ್ಟೆಯಂಡ ಎ. ಸಂಜು ಕಾವೇರಪ್ಪ, ನಾಪಂಡ ಸಿ. ಗಣೇಶ್, ರಿಜಿಸ್ಟಾçರ್ ಚಿನ್ನಸ್ವಾಮಿ, ಅಮ್ಮತ್ತಿ ಕೊಡವ ಸಮಾಜದ ಆಡಳಿತ ಮಂಡಳಿ ಹಾಗೂ ಕೊಡವ ಬಲ್ಯ ನಮ್ಮೆ ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರು ಇದ್ದರು. ಜಮುನ ಪ್ರಾರ್ಥಿಸಿದರು. ಅಶ್ವಿನಿ ಮತ್ತು ತಂಡದವರು ಕೊಡವ ನೃತ್ಯ ಪ್ರದರ್ಶಿಸಿದರು. ಅಜ್ಜಿಕುಟ್ಟೀರ ಗಿರೀಶ್ ಮತ್ತು ಅನಿತಾ ಅವರು ನಿರೂಪಿಸಿದರು.
ಕಾರ್ಯಕ್ರಮದಲ್ಲಿ ವಿಚಾರಗೋಷ್ಠಿ ನಡೆಯಿತು. ಕಾರ್ಯಕ್ರಮವನ್ನು ಅಖಿಲ ಕೊಡವ ಸಮಾಜದ ಪೊಮ್ಮಕ್ಕಡ ಪರಿಷತ್ ಅಧ್ಯಕ್ಷೆ ಬಾಚರಣಿಯಂಡ ರಾಣು ಅಪ್ಪಣ್ಣ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಚೇಮಿರ ಭೀಮಯ್ಯ, ಪಟ್ಟಡ ಪೂವಣ್ಣ, ಮಂಡೇಪAಡ ಬೋಸ್ ಮೊಣ್ಣಪ್ಪ, ಅರೆಮನೆಪಾಲೆರ ಕೆ. ಮಂದಣ್ಣ, ಕನ್ನಂಡ ಕವಿತ ಬೊಳ್ಳಪ್ಪ, ಬಾಚರಣಿಯಂಡ ಅಪ್ಪಣ್ಣ, ಬೋಡುಕುಟ್ಟಡ ರಾಧಿಕಾ ಕುಟ್ಟಪ್ಪ, ಅಜ್ಜಿನಿಕಂಡ ಸಿ. ಬೆಳ್ಯಪ್ಪ ಹಾಜರಿದ್ದರು. ನಂತರ ಅಪರಾಹ್ನ ಕವಿಗೋಷ್ಠಿ ನಡೆಯಿತು. ಕಾರ್ಯಕ್ರಮವನ್ನು ಕರ್ನಾಟಕ ಜಾನಪದ ಪರಿಷತ್ ಕೊಡಗು ಜಿಲ್ಲಾ ಅಧ್ಯಕ್ಷ ಬಿ.ಜಿ. ಅನಂತಶಯನ ಉದ್ಘಾಟಿಸಿದರು. ಕುಡಿಯರ ಮುತ್ತಪ್ಪ, ಹಂಚೆಟ್ಟಿರ ಫ್ಯಾನ್ಸಿ ಮುತ್ತಣ್ಣ, ಕ್ಯಾಪ್ಟನ್ ಬಿದ್ದಂಡ ನಾಣಯ್ಯ, ಪುತ್ತಮನೆ ವಿದ್ಯಾ ಹಾಗೂ ಇನ್ನಿತರರು ಹಾಜರಿದ್ದರು. ಪುಸ್ತಕ ಮತ್ತು ವಸ್ತು ಪ್ರದರ್ಶನವನ್ನು ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷೆ ಅಮ್ಮಾಟಂಡ ಪಾರ್ವತಿ ಅಪ್ಪಯ್ಯ ಉದ್ಘಾಟಿಸಿದರು. ಮಡಿಕೇರಿ ಕೊಡವ ಸಮಾಜದ ಅಧ್ಯಕ್ಷ ಮಂಡುವAಡ ಮುತ್ತಪ್ಪ ಮತ್ತು ಕೊಡಗು ಐರಿ ಸಮಾಜದ ಅಧ್ಯಕ್ಷ ಮೇಲತ್ತಂಡ ರಮೇಶ್ ಹಾಜರಿದ್ದರು.