ಕುಶಾಲನಗರ, ಮಾ. ೩೧: ಕುಶಾಲನಗರ ಸಮೀಪ ಮಾಲ್ದಾರೆ, ಮೀಸಲು ಅರಣ್ಯದಲ್ಲಿ ಎರಡು ಕಾಡುಕೋಣಗಳಿಗೆ ಗುಂಡು ಹಾರಿಸಿ ಹತ್ಯೆ ಮಾಡಿದ ಘಟನೆ ನಡೆದಿದೆ.

ಶುಕ್ರವಾರ ರಾತ್ರಿ ಈ ಘಟನೆ ಮೀಸಲು ಅರಣ್ಯದ ವ್ಯಾಪ್ತಿಯ ಅವರೆಗುಂದ ಬಳಿ ನಡೆದಿದ್ದು, ಕೆಲವು ದುಷ್ಕರ್ಮಿಗಳು ರಾತ್ರಿ ಸುಮಾರು ೧೦ ಗಂಟೆ ವೇಳೆಗೆ ಗುಂಡು ಹಾರಿಸಿದ ಶಬ್ದ ಕೇಳಿ ಸ್ಥಳೀಯರು ಮತ್ತು ಅರಣ್ಯ ಇಲಾಖೆ ಸಿಬ್ಬಂದಿಗಳು ಸ್ಥಳಕ್ಕೆ ಬಂದ ಸಂದರ್ಭ ಆರೋಪಿಗಳು ಪರಾರಿಯಾಗಿದ್ದಾರೆ ಎಂದು ಕುಶಾಲನಗರ ವಲಯ ಅರಣ್ಯ ಅಧಿಕಾರಿ ರತನ್ ಕುಮಾರ್ ತಿಳಿಸಿದ್ದಾರೆ.

ಎರಡು ಕಾಡುಕೋಣಗಳು ಸ್ಥಳದಲ್ಲೇ ಬಿದ್ದು ಮೃತಪಟ್ಟಿದ್ದು ಅರಣ್ಯ ಅಧಿಕಾರಿಗಳು ಮಹಜರು ನಡೆಸಿ ನಂತರ ವನ್ಯಜೀವಿ ತಜ್ಞರಿಂದ ಮರಣೋತ್ತರ ಪರೀಕ್ಷೆ ನಡೆಸಿ ಕ್ರಮ ಕೈಗೊಂಡಿದ್ದಾರೆ.

ಸಿದ್ದಾಪುರ ಸುತ್ತಮುತ್ತ ವ್ಯಾಪ್ತಿಯ ಗುಂಪೊAದು ಈ ಕೃತ್ಯ ನಡೆಸಿರುವ ಬಗ್ಗೆ ಅಧಿಕಾರಿಗಳಿಗೆ ಸುಳಿವು ದೊರೆತ ಹಿನ್ನೆಲೆ ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ನಡೆಸಿದ್ದಾರೆ.

ಈ ಸಂಬAಧ ಕುಶಾಲನಗರ ಅರಣ್ಯ ವಲಯ ಅಧಿಕಾರಿಗಳು ಮೊಕ್ಕದಮೆ ದಾಖಲಿಸಿದ್ದು ಹಂತಕರಿಗೆ ಬಲೆ ಬೀಸಿದ್ದಾರೆ. -ಚಂದ್ರಮೋಹನ್