ಸುಂಟಿಕೊಪ್ಪ, ಏ. ೭: ಶ್ರೀ ಗೌರಿ ಗಣೇಶೋತ್ಸವ ಸಮಿತಿ ವತಿಯಿಂದ ಕೋದಂಡ ರಾಮ ಮಂದಿರದಲ್ಲಿ ಭಾನುವಾರ ಶ್ರದ್ಧಾಭಕ್ತಿಯಿಂದ ರಾಮ ನವಮಿ ಆಚರಿಸಲಾಯಿತು.
ಶುದ್ಧಿ ಪೂಜೆಯೊಂದಿಗೆ ಆರಂಭಗೊAಡ ಕಾರ್ಯಕ್ರಮದಲ್ಲಿ ರಾಮ, ಲಕ್ಷö್ಮಣ, ಸೀತೆ, ಆಂಜನೇಯ ದೇವರಿಗೆ ವಿವಿಧ ಹೂವಿನ ಅಲಂಕಾರ ಮಾಡಿ ಕುಂಕುಮಾರ್ಚನೆ, ಪಂಚಾಮೃತ ಅಭಿಷೇಕದ ಗಣ ಹೋಮ ಹಾಗೂ ರಾಮತಾರಕ ಹೋಮವನ್ನು ಪ್ರಧಾನ ಅರ್ಚಕ ಜಯಂAತ್ ಭಟ್, ಕಕ್ಕಬ್ಬೆಯ ಸಂತೋಷ್ ಹೆಬ್ಬಾರ್, ರಾಘವೇಂದ್ರ ಭಟ್, ರವಿಶಂಕರ್ ಭಟ್, ಗಣೇಶ್ ಉಪಾಧ್ಯಾಯ, ಮಂಜುನಾಥ್ ಶರ್ಮಾ ನೆರವೇರಿಸಿದರು.
ಮಧ್ಯಾಹ್ನ ವಿಶೇಷ ಮಂಗಳಾರತಿ, ಮಹಾ ಆರತಿ, ಮಹಾಪೂಜೆ, ಮಹಾಮಂಗಳಾರತಿ, ಪ್ರಸಾದ ವಿನಿಯೋಗ ನಡೆಯಿತು. ನೆರೆದಿದ್ದ ನೂರಾರು ಭಕ್ತರಿಗೆ ಸಮಿತಿಯ ವತಿಯಿಂದ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.
ಸುಂಟಿಕೊಪ್ಪ ಸೇರಿದಂತೆ ಸುತ್ತಲಿನ ನೂರಾರು ಭಕ್ತರು ಆಗಮಿಸಿ ಪೂಜಾ ಕೈಂಕರ್ಯಗಳಲ್ಲಿ ಭಾಗವಹಿಸಿದ್ದರು.
ರಾಮ ನವಮಿಯ ಅಂಗವಾಗಿ ದೇವಾಲಯವನ್ನು ತಳಿರು ತೋರಣ, ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು. ಹಾಗೂ ಪಟ್ಟಣ ಹಾಗೂ ದೇವಾಲಯದ ರಸ್ತೆಯಲ್ಲಿ ಕೇಸರಿ ಧ್ಚಜ ಹಾಗೂ ಬಂಟಿAಗ್ಸ್ಗಳು ರಾರಾಜಿಸುತ್ತಿದ್ದವು.
ಗೌರಿ ಗಣೇಶೋತ್ಸವ ಸಮಿತಿ ಅಧ್ಯಕ್ಷ ವಿಘ್ನೇಶ್, ಪಿ.ಆರ್. ಸುನಿಲ್ ಕುಮಾರ್, ಧನುಕಾವೇರಪ್ಪ, ಬಿ.ಎಂ. ಸುರೇಶ್, ಸುರೇಶ್ ಗೋಪಿ, ನಿಖಿಲ್, ಗಣೇಶ ಹಾಗೂ ಪದಾಧಿಕಾರಿಗಳು ಇದ್ದರು.