ಮಡಿಕೇರಿ, ಏ. ೧೨ : ಚಾಲಕನ ನಿಯಂತ್ರಣ ತಪ್ಪಿದ ಕಾರು ಸೇತುವೆಗೆ ಡಿಕ್ಕಿ ಹೊಡೆದ ಪರಿಣಾಮ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಪ್ರಕರಣ ಬಯಲಿಗೆ ಬಂದ ಘಟನೆ ನಡೆದಿದೆ.ಪುತ್ತೂರಿನಿಂದ ಪಿರಿಯಾಪಟ್ಟಣದತ್ತ ತೆರಳುತ್ತಿದ್ದ ಕಾರು ಮಾರ್ಗ ಮಧ್ಯದ ದೇವರಕೊಲ್ಲಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಸೇತುವೆಗೆ ಗುದ್ದಿದೆ.
(ಮೊದಲ ಪುಟದಿಂದ) ಈ ಸಂದರ್ಭ ನೆರವಿಗೆ ಧಾವಿಸಿ ಬಂದ ಸ್ಥಳೀಯರಿಗೆ ಕಾರಿನಲ್ಲಿ ಗಾಂಜಾ ಪ್ಯಾಕೇಟ್ಗಳಿರುವುದು ಕಂಡು ಬಂದಿದೆ. ಕೂಡಲೇ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ತೆರಳಿ ಕಾರಿನಲ್ಲಿದ್ದ ಪುತ್ತೂರು ನಿವಾಸಿಗಳಾದ ಫಜ್ಲುದ್ದೀನ್, ಮುಷ್ತಾಕ್, ಜಾಬಿರ್ ಎಂಬವರುಗಳನ್ನು ಮತ್ತು ಗಾಂಜಾ ಪ್ಯಾಕೇಟ್ಗಳನ್ನು ವಶಕ್ಕೆ ಪಡೆದುಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಇಬ್ರಾಹಿA