ಮಡಿಕೇರಿ, ಏ. ೧೩ : ಮಡಿಕೇರಿಯ ಬ್ರೆöÊನೋಬ್ರೆöÊನ್ ಕೇಂದ್ರದ ವತಿಯಿಂದ ಅಬಾಕಸ್ ವಿದ್ಯಾರ್ಥಿಗಳಿಗೆ ಇತ್ತೀಚೆಗೆ ಪದವಿ ಪ್ರದಾನ ಮಾಡಲಾಯಿತು.
ನಗರದ ಕ್ರಿಸ್ಟಲ್ ಹಾಲ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬ್ರೆöÊನೋಬ್ರೆöÊನ್ ಕೇಂದ್ರದ ೨೧ನೇ ಬ್ಯಾಚ್ ನ ಒಟ್ಟು ೨೨ ವಿದ್ಯಾರ್ಥಿಗಳು ಪದವಿ ಸ್ವೀಕರಿಸಿದರು. ಎರಡೂವರೆ ವರ್ಷ ೧೦ ಹಂತಗಳಿರುವ ಅಬಾಕಸ್ ಕೋರ್ಸನ್ನು ಈ ವಿದ್ಯಾರ್ಥಿಗಳು ಯಶಸ್ವಿಯಾಗಿ ಪೂರೈಸಿದ್ದಾರೆ.
ಅಂತರರಾಷ್ಟಿçÃಯ ಬ್ರೆöÊನೋಬ್ರೆöÊನ್ ಸಂಸ್ಥೆಯ ಕರ್ನಾಟಕ ಬ್ರೆöÊನೋಬ್ರೆöÊನ್ ಕಿಡ್ಸ್ ಅಕಾಡೆಮಿಯ ಪ್ರಾದೇಶಿಕ ವ್ಯವಸ್ಥಾಪಕÀ ನೀಲ್ ಕಮಾಲ್ ಸ್ವರ್ಣಕರ್ ಅವರು ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿ ಮಾತನಾಡಿ ಇಲ್ಲಿಯವರಿಗೆ ಮಡಿಕೇರಿ ಕೇಂದ್ರದಿAದ ಒಟ್ಟು ೭೦೦ ವಿದ್ಯಾರ್ಥಿಗಳು ಪದವಿ ಸ್ವೀಕಾರ ಮಾಡಿದ್ದಾರೆ ಎಂದರು.
ಕರ್ನಾಟಕ ರಾಜ್ಯದ ಇತರ ಬ್ರೆöÊನೋಬ್ರೆöÊನ್ ಕೇಂದ್ರಗಳಲ್ಲೇ ಮಡಿಕೇರಿ ಕೇಂದ್ರದ ಅಬಕಾಸ್ ವಿದ್ಯಾರ್ಥಿಗಳನ್ನು ಅವರ ಶಿಸ್ತು ಪರಿಪಾಲನೆ, ಕ್ರಮಬದ್ಧವಾದ ಕಲಿಕೆಯಿಂದಲೇ ಗುರುತಿಸಲಾಗುತ್ತದೆ. ಇದೇ ಕಾರಣಕ್ಕೆ ಈ ಕೇಂದ್ರದ ವಿದ್ಯಾರ್ಥಿಗಳು ಬೇರೆ ಕೇಂದ್ರದ ಮಕ್ಕಳಿಗೆ ಮಾದರಿಯಾಗಿದ್ದಾರೆ ಎಂದು ಶ್ಲಾಘಿಸಿದರು. ಮಡಿಕೇರಿ ಕೇಂದ್ರದ ಧೃತಿ ಜೆ.ಪೂಜಾರಿ ದುಬೈನಲ್ಲಿ ನಡೆದ ಅಂತರರಾಷ್ಟಿçÃಯ ಮಟ್ಟದ ಸ್ಪರ್ಧೆಯಲ್ಲಿ ಪಾಲ್ಗೊಂಡು ಚಾಂಪಿಯನ್ ಆಗಿದ್ದಾರೆ. ಈಕೆ ಅಂತರರಾಷ್ಟಿçÃಯ ಸ್ಪರ್ಧೆಯಲ್ಲಿ ಭಾಗವಹಿಸಿದ ಮಡಿಕೇರಿ ಕೇಂದ್ರದ ಪ್ರಥಮ ವಿದ್ಯಾರ್ಥಿನಿಯಾಗಿದ್ದಾಳೆ ಎಂದು ತಿಳಿಸಿದರು.
ಮಡಿಕೇರಿಯ ಬ್ರೆöÊನೋಬ್ರೆöÊನ್ ಕೇಂದ್ರದ ಮುಖ್ಯಸ್ಥರಾದ ಮಾಪಂಗಡ ಕವಿತಾ ಕರುಂಬಯ್ಯ ಅವರು ಮಾತನಾಡಿ, ಮಕ್ಕಳಲ್ಲಿ ಸ್ಮರಣ ಶಕ್ತಿ, ಕಲ್ಪನಾ ಶಕ್ತಿ, ಆತ್ಮವಿಶ್ವಾಸ, ಚುರುಕುತನ, ಬಹುಕಾರ್ಯ ಕೌಶಲ್ಯ, ಛಾಯಾಗ್ರಹಣ ಶಕ್ತಿ ಹೆಚ್ಚಾಗುವುದರೊಂದಿಗೆ ಮಕ್ಕಳ ಕನಸಿಗೆ ರೆಕ್ಕೆ ಸಿಕ್ಕಂತಾಗಿದೆ ಎಂದರು. ಅಭಿಪ್ರಾಯ ಹಂಚಿಕೊAಡ ವಿದ್ಯಾರ್ಥಿಗಳು ಅಬಾಕಸ್ ಕುರಿತು ಮೆಚ್ಚುಗೆಯ ಮಾತುಗಳನ್ನಾಡಿದರು.
ಕಾರ್ಯಕ್ರಮದಲ್ಲಿ ಪಶುಸಂಗೋಪನಾ ಇಲಾಖೆಯ ನಿವೃತ್ತ ಉಪನಿರ್ದೇಶಕ ಕನ್ನಂಡ ಡಾ.ಅಯ್ಯಪ್ಪ ಹಾಗೂ ಮಾಪಂಗಡ ಮೋಹನ್ ಕರುಂಬಯ್ಯ ಅವರು ಕೊಡಗಿನ ಸಾಂಪ್ರದಾಯಿಕ ಸ್ಮರಣಿಕೆೆಯನ್ನು ನೀಲ್ ಕಮಾಲ್ ಸ್ವರ್ಣಕರ್ ಅವರಿಗೆ ನೀಡಿ ಗೌರವಿಸಿದರು. ಕೇಂದ್ರದ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ವಿದ್ಯಾರ್ಥಿಗಳಿಂದ ನಡೆದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಗಮನ ಸೆಳೆದವು.